ಶ್ರದ್ಧಾ ಹತ್ಯೆ : ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡ ಅಫ್ತಾಬ್

Webdunia
ಮಂಗಳವಾರ, 22 ನವೆಂಬರ್ 2022 (12:56 IST)
ನವದೆಹಲಿ : ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ ಕೋರ್ಟ್ ಮುಂದೆ ಮೊದಲ ಬಾರಿ ತಪ್ಪೊಪ್ಪಿಕೊಂಡಿದ್ದಾನೆ.

ಪೊಲೀಸ್ ಕಸ್ಟಡಿ ವಿಸ್ತರಣೆ ವೇಳೆ ಹತ್ಯೆ ಮಾಡಿರುವುದಾಗಿ ಕೋರ್ಟ್ನಲ್ಲಿ ಹೇಳಿಕೆ ದಾಖಲಿಸಿದ್ದಾನೆ. ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನಲೆ ಕಸ್ಟಡಿಗಾಗಿ ಸಾಕೇತ್ ಜಿಲ್ಲಾ ನ್ಯಾಯಲಯದ ಮುಂದೆ ಅಫ್ತಾಬ್ ನನ್ನು ಹಾಜರುಪಡಿಸಲಾಗಿತ್ತು.

ಈ ವೇಳೆ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡ ಅಫ್ತಾಬ್ ಜಗಳದ ಆವೇಶದಲ್ಲಿ ಹತ್ಯೆ ಮಾಡಿದ್ದೇನೆ, ಹತ್ಯೆಯ ಮಾಡಿರುವುದಕ್ಕೆ ಪಶ್ಚಾತ್ತಾಪ ಇದೆ, ಘಟನೆಯನ್ನು ನೆನಪಿಸಿಕೊಳ್ಳಲು ಬೇಸರವಿದೆ ಎಂದು ಹೇಳಿಕೊಂಡಿದ್ದಾನೆ. 

ಅಫ್ತಾಬ್ ಹೇಳಿಕೆ ಬಳಿಕ ಪೊಲೀಸರು ಕಸ್ಟಡಿ ವಿಸ್ತರಣೆಗೆ ಮನವಿ ಮಾಡಿದರು. ಅಫ್ತಾಬ್ ಹೇಳಿಕೆ ಆಧರಿಸಿ ತನಿಖೆ ಮಾಡಬೇಕಿದೆ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ತನಿಖೆ ನಡೆಸಬೇಕಿದೆ.

ಈ ಹಿನ್ನಲೆ ಅವಧಿ ವಿಸ್ತರಣೆ ಮಾಡಬೇಕು ಎಂದು ದೆಹಲಿ ಪೊಲೀಸರ ಪರ ವಕೀಲರು ಮನವಿ ಮಾಡಿದರು. ಮನವಿಗೆ ಸ್ಪಂಧಿಸಿದ ಕೋರ್ಟ್ ನಾಲ್ಕು ದಿನಕ್ಕೆ ಕಸ್ಟಡಿಯನ್ನು ವಿಸ್ತರಿಸಿ ಆದೇಶ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಅಲ್ ಫಲಾಹ್‌ನಂತೆ ಎಲ್ಲ ವಿಶ್ವವಿದ್ಯಾಲಯಗಳು ತನಿಖೆಗೊಳಗಾಗಬೇಕು: ವಿನೋದ್ ಬನ್ಸಾಲ್

ಮುಂದಿನ ಸುದ್ದಿ
Show comments