Select Your Language

Notifications

webdunia
webdunia
webdunia
webdunia

ಬಸ್-ಟಾಟಾ ಏಸ್ ನಡುವೆ ಡಿಕ್ಕಿ: ಮೂವರ ದುರ್ಮರಣ

ಬಸ್-ಟಾಟಾ ಏಸ್ ನಡುವೆ ಡಿಕ್ಕಿ: ಮೂವರ ದುರ್ಮರಣ
ಕೊಪ್ಪಳ , ಶುಕ್ರವಾರ, 4 ಸೆಪ್ಟಂಬರ್ 2015 (09:26 IST)
ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿ  1 ಗಂಟೆ ಸುಮಾರಿಗೆ ಈ ಅವಘಡ ನಡೆದಿದೆ.
 
ತಾಲೂಕಿನ ಅಳವಂಡಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದ್ದು ಮೃತಪಟ್ಟವರನ್ನು ಟಾಟಾ ಏಸ್‌ನಲ್ಲಿದ್ದ ಗೋಣೆಪ್ಪ ಮುಕ್ಕುಂದ, ಹುಲುಗಪ್ಪ ಮುಕ್ಕುಂದ ಹಾಗೂ ಕೋಟೆಪ್ಪ ಎಂದು ಗುರುತಿಸಲಾಗಿದೆ. ನವೀನ್ ಎಂಬ ಯುವಕ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
 
ಮೃತರೆಲ್ಲರೂ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಕಂದಪುರ ಗ್ರಾಮದ ನಿವಾಸಿಗಳಾಗಿದ್ದಾರೆ.
 
ಟಾಟಾ ಏಸ್‌ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಅಪಘಾತದ ಬಳಿಕ ಸರ್ಕಾರಿ ಬಸ್ ಚಾಲಕ ಮತ್ತು ನಿರ್ವಾಹಕರು ಬಸ್‌ನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada