Webdunia - Bharat's app for daily news and videos

Install App

ಭೀಕರ ಘಟನೆ : ಬೆಂಕಿ ಹೊತ್ತಿಕೊಂಡು ರಸ್ತೆಯಲ್ಲಿ ಓಡಿದ ದಂಪತಿ! ಮುಂದೇನಾಯ್ತು?

Webdunia
ಶನಿವಾರ, 15 ಜನವರಿ 2022 (13:56 IST)
ಕೊಲ್ಕತ್ತಾ : ಮೈಗೆ ಬೆಂಕಿ ಹೊತ್ತಿಕೊಂಡಿದ್ದರೂ ಗಂಡ-ಹೆಂಡತಿ ರಸ್ತೆಯ ತುಂಬ ಓಡಾಡಿ, ಚೀರಾಡುತ್ತಾ ಆತಂಕ ಸೃಷ್ಟಿಸಿರುವ ಆಘಾತಕಾರಿ ಘಟನೆ ಕೊಲ್ಕತ್ತಾದಲ್ಲಿ ನಡೆದಿದೆ.

ನ್ಯೂಟೌನ್ನ ಘುನಿ ಪ್ರದೇಶದ ಸ್ಥಳೀಯರ ಪ್ರಕಾರ, ಅರೆ ಸುಟ್ಟ ಸ್ಥಿತಿಯಲ್ಲಿದ್ದ ದಂಪತಿಗಳು ತಮ್ಮ ಅಪಾರ್ಟ್‌ಮೆಂಟ್‌ನಿಂದ ಬೀದಿಗೆ ಓಡಿ ಬಂದಿದ್ದಾರೆ. ಗಾಳಿಗೆ ಬೆಂಕಿ ಇನ್ನೂ ಹೆಚ್ಚಾಗಿ ಉರಿಯುತ್ತಿದ್ದಂತೆ ಜೋರಾಗಿ ಕಿರುಚಲು ಪ್ರಾರಂಭಿಸಿದ್ದಾರೆ.

ಬೆಂಕಿ ಹೊತ್ತಿಕೊಂಡಿದ್ದರಿಂದ ರಸ್ತೆಯಲ್ಲಿ ಕಿರುಚಾಡುತ್ತಿದ್ದ ಆ ಇಬ್ಬರು ವ್ಯಕ್ತಿಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಈ ಭೀಕರ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಬೆಂಕಿ ಹೊತ್ತಿಕೊಂಡಿದ್ದ ಆ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಆರ್‌ಜಿ ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಗಂಡ-ಹೆಂಡತಿ ಕಳೆದ ನಾಲ್ಕು ವರ್ಷಗಳಿಂದ ಅಪಾರ್ಟ್ಮೆಂಟ್ನ ಕಟ್ಟಡದಲ್ಲಿ ವಾಸಿಸುತ್ತಿದ್ದರು.

ಮೂಲಗಳ ಪ್ರಕಾರ, ಶಕೀಲಾ ಸುಲ್ತಾನಾ ಅಡುಗೆ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಆಕೆಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಹೊತ್ತಿಕೊಂಡಿದೆ. ಆಕೆಯ ಗಂಡ ಆಕೆಯನ್ನು ರಕ್ಷಿಸಲು ಹೋದಾಗ, ಆತನಿಗೆ ಕೂಡ ಬೆಂಕಿ ಆವರಿಸಿದೆ ಎನ್ನಲಾಗಿದೆ. ಹೀಗಾಗಿ, ತಮ್ಮ ಪ್ರಾಣ ಉಳಿಸಿಕೊಳ್ಳಲು ಅವರಿಬ್ಬರೂ ಕಟ್ಟಡದಿಂದ ಹೊರ ಬಂದಿದ್ದು, ಯಾರಾದರೂ ಬೆಂಕಿ ನಂದಿಸಲಿ ಎಂದು ಕಿರುಚಾಡಿದ್ದಾರೆ.

ಈ ಘಟನೆಯ ನಂತರ, ದುರಂತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಇಕೋ ಪಾರ್ಕ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದು ಅಪಘಾತವೋ, ಕೊಲೆಯೋ, ಆತ್ಮಹತ್ಯೆ ಯತ್ನವೋ ಎಂಬುದನ್ನು ಪರಿಶೀಲಿಸಲು ಇಕೋಪಾರ್ಕ್ ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments