Webdunia - Bharat's app for daily news and videos

Install App

ಇದೆಂತಾ ಕ್ರೂರಿಗಳ ದೌರ್ಜನ್ಯ: ಕುದುರೆಗೆ ಒತ್ತಾಯಪೂರ್ವಕ ಮದ್ಯ ಕುಡಿಸಿ ಹತ್ಯೆಗೈದ ದುರುಳರು

Webdunia
ಸೋಮವಾರ, 6 ನವೆಂಬರ್ 2017 (12:52 IST)
ಪ್ರಾಣಿಗಳ ಮೇಲಿನ ಕ್ರೌರ್ಯದ ಅಮಾನುಷ ಕೃತ್ಯಕ್ಕೆ ಇಲ್ಲಿದೆ ಉದಾಹರಣೆ. ಸಾಮಾಜಿಕ ಕಾರ್ಯಕ್ರಮವೊಂದರಲ್ಲಿ ಕುದುರೆಯೊಂದಕ್ಕೆ ಒತ್ತಾಯಪೂರ್ವಕವಾಗಿ ಅತಿಯಾದ ಮದ್ಯ ಕುಡಿಸಿ ಹತ್ಯೆಗೈದ ಹೇಯ ಘಟನೆ ವರದಿಯಾಗಿದೆ 
ಕಳೆದ ಕೆಲ ದಿನಗಳ ಹಿಂದೆ ಹಿಲ್ವಾರಿ ಗ್ರಾಮದಲ್ಲಿ ಕುಟುಂಬವೊಂದು ಆಯೋಜಿಸಲಾದ ಚಾಟ್ಟಿ ಕಾರ್ಯಕ್ರಮದಲ್ಲಿ( ಗಂಡು ಮಗು ಜನಿಸಿದ ಆರನೇ ದಿನದಂದು ಆಚರಿಸುವ ಕಾರ್ಯಕ್ರಮ) ಕೆಲ ಯುವಕರು ಒತ್ತಾಯಪೂರ್ವಕವಾಗಿ ಕುದುರೆಗೆ ಅತಿಯಾದ ಮದ್ಯ ಕುಡಿಸಿದ್ದಾರೆ. ನಂತರ ಕುದುರೆ ಸಾವನ್ನಪ್ಪಿ ಕೆಳಗೆ ಬಿದ್ದ ನಂತರ ಅದರ ಸುತ್ತಲು ನೃತ್ಯ ಮಾಡಿ ಕ್ರೂರತೆಯನ್ನು ಮೆರೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ.
 
ಕುದುರೆಯ ಮಾಲೀಕ, ಯುವಕರನ್ನು ತಡೆಯಲು ಯತ್ನಿಸಿದರಾದರೂ ಯಾವುದೇ ಪ್ರಯೋಜನವಾಗಿಲ್ಲ. ಯುವಕರು ಆತನನ್ನು ಹಿಂದಕ್ಕೆ ತಳ್ಳಿಹಾಕಿದರು ಎಂದು ಮೂಲಗಳು ತಿಳಿಸಿವೆ.
 
ಸಾವಿರಾರು ಜನರು ಘಟನೆಯ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಆದರೆ, ಯಾರೊಬ್ಬರು ತಡೆಯುವ ಪ್ರಯತ್ನ ಮಾಡಲಿಲ್ಲ. ಎಲ್ಲರು ನಗು ನಗುತ್ತಲೇ ಯುವಕರ ಕೃತ್ಯಕ್ಕೆ ಸಂತಸ ವ್ಯಕ್ತಪಡಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. 
 
ಘಟನೆಯ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ತನಿಖೆಯನ್ನು ನಡೆಸಿ ಮಾಹಿತಿ ಸತ್ಯವಾಗಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments