ಗಾಂಧೀಜಿಗೆ ಶಸ್ತ್ರಚಿಕಿತ್ಸೆ ಮಾಡಿದ ಆ ಕೊಠಡಿಗೆ ಈಗಲೂ ಯಾರಿಗೂ ಎಂಟ್ರಿಯಿಲ್ಲ!

Webdunia
ಬುಧವಾರ, 2 ಅಕ್ಟೋಬರ್ 2019 (07:45 IST)
ಮುಂಬೈ: ಇಂದು ಅಕ್ಟೋಬರ್ 2. ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯ ಜನ್ಮದಿನವನ್ನು ನಾನಾ ರೀತಿಯಲ್ಲಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಗಾಂಧೀಜಿಗೆ ಕುರಿತಾದ ಹಳೆಯ ನೆನಪೊಂದನ್ನು ಮೆಲುಕು ಹಾಕೋಣ.


ಅದು 1924 ರ ಸಮಯ. ಆಗ ಗಾಂಧೀಜಿ ಅಪೆಂಡಿಟೈಟಿಸ್ ಸಮಸ್ಯೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಬೇಕಿತ್ತು. ಹೀಗಾಗಿ ಪುಣೆಯ ಆಸ್ಪತ್ರೆಗೆ ದಾಖಲಾಗಿದ್ದರು. ಆವತ್ತು ವಿಪರೀತ ಗುಡುಗು-ಸಿಡಿಲ ಜತೆಗೆ ಧಾರಾಕಾರ ಮಳೆಯಾಗುತ್ತಿತ್ತು. ಹೀಗಾಗಿ ವಿದ್ಯುತ್ ಸಂಪರ್ಕವೂ ಕಡಿದುಹೋಗಿತ್ತು.

ಹಾಗಿದ್ದರೂ ಅಂದು ರಾತ್ರಿ ಗಾಂಧೀಜಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆ ಆಸ್ಪತ್ರೆಯ ಕೊಠಡಿಯನ್ನು ಅದಾದ ಬಳಿಕ ಸಾರ್ವಜನಿಕರಿಗೆ ಬಳಸಲು ಅವಕಾಶ ಮಾಡಿಕೊಡಲಿಲ್ಲ. ಅದಾದ ಬಳಿಕ ಇಂದಿಗೂ ಅಂದರೆ ಬರೋಬ್ಬರಿ 95 ವರ್ಷಗಳ ಬಳಿಕವೂ ಆ ಶಸ್ತ್ರಚಿಕಿತ್ಸೆ ಕೊಠಡಿ ಲಾಕ್ ಆಗಿಯೇ ಇದೆ. ಅಲ್ಲಿ ಈಗಲೂ ಅಂದು ಗಾಂಧೀಜಿ ಶಸ್ತ್ರಚಿಕಿತ್ಸೆಗೆ ಬಳಸಿದ್ದ ಪರಿಕರಗಳು, ಟೇಬಲ್ ಎಲ್ಲವೂ ಇವೆಯಂತೆ. ಅದು ಇಂದಿಗೆ ಒಂದು ಸ್ಮಾರಕದಂತೆ ಉಳಿಸಿಕೊಳ್ಳಲಾಗಿದೆ. ಈಗಲೂ ಪ್ರತೀವರ್ಷವೂ ಗಾಂಧೀ ಜಯಂತಿಗೆ ಅಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತದಂತೆ. ಬಾಪೂಜಿ ನೆನಪನ್ನು ಆ ಆಸ್ಪತ್ರೆ ಮತ್ತು ಅಲ್ಲಿನ ಸಿಬ್ಬಂದಿ ಎಂದಿಗೂ ಮರೆಯುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments