Webdunia - Bharat's app for daily news and videos

Install App

ಗಾಂಧೀಜಿಗೆ ಶಸ್ತ್ರಚಿಕಿತ್ಸೆ ಮಾಡಿದ ಆ ಕೊಠಡಿಗೆ ಈಗಲೂ ಯಾರಿಗೂ ಎಂಟ್ರಿಯಿಲ್ಲ!

Webdunia
ಬುಧವಾರ, 2 ಅಕ್ಟೋಬರ್ 2019 (07:45 IST)
ಮುಂಬೈ: ಇಂದು ಅಕ್ಟೋಬರ್ 2. ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯ ಜನ್ಮದಿನವನ್ನು ನಾನಾ ರೀತಿಯಲ್ಲಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಗಾಂಧೀಜಿಗೆ ಕುರಿತಾದ ಹಳೆಯ ನೆನಪೊಂದನ್ನು ಮೆಲುಕು ಹಾಕೋಣ.


ಅದು 1924 ರ ಸಮಯ. ಆಗ ಗಾಂಧೀಜಿ ಅಪೆಂಡಿಟೈಟಿಸ್ ಸಮಸ್ಯೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಬೇಕಿತ್ತು. ಹೀಗಾಗಿ ಪುಣೆಯ ಆಸ್ಪತ್ರೆಗೆ ದಾಖಲಾಗಿದ್ದರು. ಆವತ್ತು ವಿಪರೀತ ಗುಡುಗು-ಸಿಡಿಲ ಜತೆಗೆ ಧಾರಾಕಾರ ಮಳೆಯಾಗುತ್ತಿತ್ತು. ಹೀಗಾಗಿ ವಿದ್ಯುತ್ ಸಂಪರ್ಕವೂ ಕಡಿದುಹೋಗಿತ್ತು.

ಹಾಗಿದ್ದರೂ ಅಂದು ರಾತ್ರಿ ಗಾಂಧೀಜಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆ ಆಸ್ಪತ್ರೆಯ ಕೊಠಡಿಯನ್ನು ಅದಾದ ಬಳಿಕ ಸಾರ್ವಜನಿಕರಿಗೆ ಬಳಸಲು ಅವಕಾಶ ಮಾಡಿಕೊಡಲಿಲ್ಲ. ಅದಾದ ಬಳಿಕ ಇಂದಿಗೂ ಅಂದರೆ ಬರೋಬ್ಬರಿ 95 ವರ್ಷಗಳ ಬಳಿಕವೂ ಆ ಶಸ್ತ್ರಚಿಕಿತ್ಸೆ ಕೊಠಡಿ ಲಾಕ್ ಆಗಿಯೇ ಇದೆ. ಅಲ್ಲಿ ಈಗಲೂ ಅಂದು ಗಾಂಧೀಜಿ ಶಸ್ತ್ರಚಿಕಿತ್ಸೆಗೆ ಬಳಸಿದ್ದ ಪರಿಕರಗಳು, ಟೇಬಲ್ ಎಲ್ಲವೂ ಇವೆಯಂತೆ. ಅದು ಇಂದಿಗೆ ಒಂದು ಸ್ಮಾರಕದಂತೆ ಉಳಿಸಿಕೊಳ್ಳಲಾಗಿದೆ. ಈಗಲೂ ಪ್ರತೀವರ್ಷವೂ ಗಾಂಧೀ ಜಯಂತಿಗೆ ಅಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತದಂತೆ. ಬಾಪೂಜಿ ನೆನಪನ್ನು ಆ ಆಸ್ಪತ್ರೆ ಮತ್ತು ಅಲ್ಲಿನ ಸಿಬ್ಬಂದಿ ಎಂದಿಗೂ ಮರೆಯುವುದಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments