Webdunia - Bharat's app for daily news and videos

Install App

ಗರ್ಭಿಣಿಯ ಮೇಲೆ ಆಸ್ಪತ್ರೆಯ ಸಿಬ್ಬಂದಿಯಿಂದಲೇ ಅತ್ಯಾಚಾರ!

Webdunia
ಶುಕ್ರವಾರ, 13 ಮೇ 2022 (11:50 IST)
ಲಕ್ನೋ : ಉತ್ತರ ಪ್ರದೇಶದ ಮಿರ್ಜಾಪುರದ  ಆಸ್ಪತ್ರೆಯೊಂದರಲ್ಲಿ ಸ್ವಚ್ಛತಾ ಸಿಬ್ಬಂದಿಯೊಬ್ಬ  ಗರ್ಭಿಣಿ ಮಹಿಳೆಯ ಮೇಲೆ  ಅತ್ಯಾಚಾರವೆಸಗಿದ್ದಾರೆ. ಮಹಿಳೆ ವಾಶ್ ರೂಂಗೆ ಹೋಗಿದ್ದ ವೇಳೆ ಆರೋಪಿ ತನ್ನ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ದೂರು ನೀಡಿದ್ದಾರೆ. ಈ ಕುರಿತು ಉನ್ನತ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾ ಆಸ್ಪತ್ರೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
 
ಮೇ 7ರ ಶನಿವಾರ ರಾತ್ರಿ ಮಿರ್ಜಾಪುರದ ವಿಭಾಗೀಯ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಮೂರು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆ ಅನಾರೋಗ್ಯದ ಹಿನ್ನೆಲೆಯಲ್ಲಿ ಪತಿ ಆಸ್ಪತ್ರೆಗೆ ಕರೆದೊಯ್ದಿದ್ದರು. ರಾತ್ರಿ 9 ರಿಂದ 10 ಗಂಟೆಯ ನಡುವೆ ಸಂತ್ರಸ್ತೆ ತನ್ನ ವಾರ್ಡ್‌ನಲ್ಲಿರುವ ವಾಶ್‌ರೂಮ್‌ಗೆ  ಹೋಗಿದ್ದಳು, ಈ ವೇಳೆ ಸ್ವಚ್ಛತಾ ಸಿಬ್ಬಂದಿ ಅತ್ಯಾಚಾರ ಎಸಗಿದ್ದಾನೆ.
 
ಆಕೆ ಮಾಡಿರುವ ಆರೋಪದ ಪ್ರಕಾರ, ಸ್ವಚ್ಛತೆಯ ಕೆಲಸ ಮಾಡುವ ವ್ಯಕ್ತಿ ಸ್ನಾನಗೃಹಕ್ಕೆ ನುಗ್ಗಿ, ಅವಳನ್ನು ವಿವಸ್ತ್ರಗೊಳಿಸಿ ಅವಳ ಬಟ್ಟೆಗಳನ್ನು ಎಸೆದಿದ್ದ, "ನೀವು ಈಗ ಬಟ್ಟೆಯಿಲ್ಲದೆ ಎಲ್ಲಿಗೆ ಹೋಗುತ್ತೀರಿ?"  ಎಂದೂ ಪ್ರಶ್ನೆ ಮಾಡಿದ್ದಾರೆ. ಬಳಿಕ ಆಕೆಯ ಬಾಯಿಯನ್ನು ಬಲವಂತವಾಗಿ ಮುಚ್ಚಿ ಅತ್ಯಾಚಾರ ಎಸಗಿದ್ದಾನೆ. ಕೊನೆಗೆ ಆಕೆ ಕಿರುಚಾಡಿದಾಗ, ಸಂತ್ರಸ್ತೆಯ ಮಾತು ಕೇಳಿ ಸ್ಥಳಕ್ಕಾಗಮಿಸಿದ ಇತರ ಮಹಿಳೆಯರು ನೋಡುವಷ್ಟರಲ್ಲಿ ಆರೋಪಿ ಪರಾರಿಯಾಗಿದ್ದಾನೆ. ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಮನೆಗೆ ತೆರಳಿ ಪತಿಗೆ ನಡೆದ ಘಟನೆಯನ್ನು ಹೇಳಿದ್ದಾಳೆ.
 
ಪತಿ ಆಕೆಯನ್ನು ಜಿಲ್ಲಾ ಮಹಿಳಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಅವರು ಪೊಲೀಸರಿಗೆ ಸಂಪೂರ್ಣ ಘಟನೆಯ ವರದಿಯನ್ನು ಸಲ್ಲಿಸಿದರು. ಆಸ್ಪತ್ರೆಯ ಮುಖ್ಯಸ್ಥ ಪ್ರವೀಣ್ ಕುಮಾರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಜಯ್ ಕೆ ಸಿಂಗ್ ಕೂಡ ಸಂತ್ರಸ್ತೆ ಮತ್ತು ಆಕೆಯ ಪತಿಯಿಂದ ಘಟನೆಯ ಬಗ್ಗೆ ವಿಚಾರಿಸಲು ಆಗಮಿಸಿದರು. ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಪತ್ತೆಯಾಗಿದ್ದು, ಆರೋಪಿಗಳ ಪತ್ತೆಗೆ ತಂಡವನ್ನು ರಚಿಸಲಾಗಿದೆ ಎಂದು ಕುಮಾರ್ ಹೇಳಿದ್ದಾರೆ.
 
ಏತನ್ಮಧ್ಯೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ), ಸಂಜಯ್ ಕುಮಾರ್ ವರ್ಮಾ, ' ಈ ಕುರಿತಂತೆ ಪ್ರಕರಣ ದಾಖಲಿಸಲಾಗಿದೆ ಮತ್ತು ಕ್ರಮ ಕೈಗೊಳ್ಳಲಾಗುತ್ತಿದೆ. ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು ಎಂದಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments