Webdunia - Bharat's app for daily news and videos

Install App

ಅಂದು ಸರ್ಜಿಕಲ್ ಸ್ಟ್ರೈಕ್: ಇಂದು ಏರ್ ಸ್ಟ್ರೈಕ್? ಕಾರ್ಯಾಚರಣೆ ಹೇಗಿತ್ತು ಗೊತ್ತಾ?

Webdunia
ಮಂಗಳವಾರ, 26 ಫೆಬ್ರವರಿ 2019 (09:43 IST)
ನವದೆಹಲಿ: ಉರಿ ದಾಳಿಗೆ ಪ್ರತೀಕಾರವಾಗಿ ಭಾರತೀಯ ಭೂ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿ ಪ್ರತೀಕಾರ ತೀರಿಸಿಕೊಂಡಿತ್ತು. ಆದರೆ ಈ ಬಾರಿ ಪುಲ್ವಾಮಾ ದಾಳಿಗೆ ಪ್ರತೀಕಾರ ತೀರಿಸಿದ್ದು ಭಾರತೀಯ ವಾಯು ಸೇನೆ.


ವಾಯು ಸೇನೆ ನಡೆಸಿದ್ದು ಈ ಬಾರಿ ಏರ್ ಸ್ಟ್ರೈಕ್. ಇದು ನಡೆದಿರುವುದು ಬೆಳಗಿನ ಜಾವ 3.30 ಕ್ಕೆ. ಪಂಜಾಬ್ ನ ಆದಂಪುರ್ ವಾಯುನೆಲೆಯಿಂದ ಹೊರಟ ಮಿರಾಜ್ ಯುದ್ಧ ವಿಮಾನಗಳು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ಅಡುಗದಾಣಗಳ ಮೇಲೆ 1000 ಕೆಜಿ ತೂಕದ ಬಾಂಬ್ ಸುರಿಮಳೆಗೈದಿತ್ತು.

ಈ ಸಂದರ್ಭದಲ್ಲಿ ಭಾರತೀಯ ವಾಯುಸೇನೆಗೆ ಯಾವುದೇ ಹಾನಿಯಾಗದೇ ಮರಳಿ ಬಂದಿದ್ದು, ನಮ್ಮ ಹೆಮ್ಮೆ. ಪಾಕಿಸ್ತಾನದ ರಾಡರ್ ಕಣ್ತಪ್ಪಿಸಿ ವಾಯು ಪಡೆ ವಿಮಾನಗಳು ಸುಮಾರು 40 ನಿಮಿಷ ಕಾರ್ಯಾಚರಣೆ ನಡೆಸಿವೆ. ಪಾಕ್ ವಾಯು ಸೇನೆ ಪ್ರತಿದಾಳಿ ನಡೆಸುವಷ್ಟರಲ್ಲಿ ಭಾರತೀಯ ವಾಯು ಪಡೆ ಸ್ಥಳದಿಂದ ನಿರ್ಗಮಿಸಿತ್ತು. ಒಟ್ಟು 1000 ಕೆಜಿ ತೂಕದ 10 ಬಾಂಬ್ ಗಳನ್ನು ವಾಯು ಪಡೆ ಹಾಕಿದ್ದು, ಇದು ಲೇಜರ್ ನಿಯಂತ್ರಿತ ಬಾಂಬ್ ಆಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments