Webdunia - Bharat's app for daily news and videos

Install App

ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿ ಎಷ್ಟನೇ ಸ್ಥಾನ?

Webdunia
ಬುಧವಾರ, 27 ಏಪ್ರಿಲ್ 2022 (15:20 IST)
ನವದೆಹಲಿ :  ಅದಾನಿ ಗ್ರೂಪ್ ಮಾಲೀಕ ಗೌತಮ್ ಅದಾನಿ ಭಾರತ ಮತ್ತು ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಉಳಿದಿಲ್ಲ.

ಈಗ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಈಗ ಅದಾನಿ ಆಸ್ತಿಯು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ಗೆ ಆಸ್ತಿಗೆ ಸಮನಾಗಿದೆ.

ಬ್ಲೂಮ್ಬರ್ಗ್ ಬಿಲಿಯನೇರ್ಸ್(ಶತಕೋಟ್ಯಧಿಪತಿ) ರಿಯಲ್ ಟೈಂ ಇಂಡೆಕ್ಸ್ ಪ್ರಕಾರ, ಅದಾನಿ ಮತ್ತು ಬಿಲ್ ಗೇಟ್ಸ್ ಇಬ್ಬರೂ 125 ಬಿಲಿಯನ್ ಡಾಲರ್( 9.58 ಲಕ್ಷ ರೂ.)ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಗೌತಮ್ ಅದಾನಿ ವಿಶ್ವದ ಐದನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಈ ಪಟ್ಟಿಯಲ್ಲಿ ಅವರು ಬಿಲ್ ಗೇಟ್ಸ್ಗಿಂತ ಸ್ವಲ್ಪ ಹಿಂದೆ ಇದ್ದಾರೆ.

ಗೌತಮ್ ಅದಾನಿ ಅವರ ಸಂಪತ್ತು ಕೇವಲ ಒಂದೇ ದಿನದಲ್ಲಿ 6.3 ಬಿಲಿಯನ್ ಡಾಲರ್ ಏರಿಕೆ ಕಂಡಿದೆ. ಅದಾನಿಯವರ ಸಂಪತ್ತು ಈ ಒಂದೇ ವರ್ಷದಲ್ಲಿ 48.3 ಬಿಲಿಯನ್ ಡಾಲರ್ ಹೆಚ್ಚಾಗಿದೆ.

2021 ರ ಅಂತ್ಯದ ವೇಳೆಗೆ ಗೌತಮ್ ಅದಾನಿ ಅವರ ಆಸ್ತಿ 76.7 ಬಿಲಿಯನ್ ಡಾಲರ್ ಆಗಿತ್ತು. ಅದಾನಿ ಗ್ರೂಪ್ ಆಫ್ ಕಂಪನಿಗಳ ಷೇರು ಬೆಲೆಗಳು ನಿರಂತರವಾಗಿ ಏರುತ್ತಲೇ ಇರುವುದರಿಂದ ಆದಾನಿ ಅವರ ಆಸ್ತಿಯ ಮೌಲ್ಯ ಏರಿಕೆಯಾಗುತ್ತಿವೆ.

ಬಿಲಿಯನೇರ್ಗಳ ಪಟ್ಟಿಯಲ್ಲಿ ಅದಾನಿಗಿಂತ ಮೊದಲಿನ ಸ್ಥಾನದಲ್ಲಿಒ  ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್(19 ಲಕ್ಷ ಕೋಟಿ ರೂ.), ಅಮೇಜಾನ್ ಸಂಸ್ಥಾಪಕ ಜೆಫ್ ಬೆಜೋಸ್(12.5 ಲಕ್ಷ ಕೋಟಿ ರೂ.), ಫ್ರಾನ್ಸಿನ ಉದ್ಯಮಿ ಎಲ್ವಿಎಂಎಚ್ ಮುಖ್ಯಸ್ಥ ಬರ್ನಾರ್ಡ್ ಅರ್ನಾಲ್ಟ್(10.2 ಲಕ್ಷ ಕೋಟಿ ರೂ.) ಮತ್ತು ಬಿಲ್ ಗೇಟ್ಸ್ ಹೆಸರುಗಳಿವೆ.

ಆದರೆ ಅವರೆಲ್ಲರ ಆಸ್ತಿ ನಿರಂತರವಾಗಿ ಕುಸಿಯುತ್ತಿದೆ. ಆದರೆ ಅದಾನಿ ನಿರಂತರವಾಗಿ ಏರಿಕೆ ಕಾಣುತ್ತಿದೆ. ಗೌತಮ್ ಅದಾನಿ ಸಂಪತ್ತು ಈ ವೇಗದಲ್ಲೇ ಸಾಗಿದರೆ ಶೀಘ್ರದಲ್ಲೇ ಅವರು ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮುವ ಸಾಧ್ಯತೆಯಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments