ಪೆಹಲ್ಗಾಮ್ ಗೆ ಈಗ ಪ್ರವಾಸಿಗರು ಬರ್ತಿದ್ದಾರಾ, ಹೇಗಿದೆ ಸೆಕ್ಯುರಿಟಿ

ಕೃಷ್ಣವೇಣಿ ಕೆ
ಬುಧವಾರ, 22 ಏಪ್ರಿಲ್ 2026 (09:01 IST)
ಜಮ್ಮು ಕಾಶ್ಮೀರ: ಕಳೆದ ವರ್ಷ ಇದೇ ದಿನ ಪೆಹಲ್ಗಾಮ್ ನಲ್ಲಿ ಪಾಕ್ ಪ್ರೇರಿತ ಭಯೋತ್ಪಾದಕರು ಭೀಕರ ದಾಳಿ ನಡೆಸಿ 26 ಹಿಂದೂ ನಾಗರಿಕರನ್ನು ಕೊಂದು ಹಾಕಿದ್ದರು. ಈ ಹೇಯ ಕೃತ್ಯಕ್ಕೆ ಇಂದು ವರ್ಷವಾಗಿದ್ದು, ಇದೀಗ ಪ್ರವಾಸಿಗರು ಅಲ್ಲಿಗೆ ಬರುತ್ತಿದ್ದಾರಾ, ಸೆಕ್ಯುರಿಟಿ ಹೇಗಿದೆ ಇಲ್ಲಿದೆ ವಿವರ.

ಪೆಹಲ್ಗಾಮ್ ನ ಬೈಸರಣ್ ಹುಲ್ಲುಗಾವಲಿನ ಮೇಲೆ ತಮ್ಮ ಕುಟುಂಬದವರ ಜೊತೆ ಸಂತೋಷವಾಗಿ ಕಾಲ ಕಳೆಯುತ್ತಿದ್ದ ಭಾರತೀಯ ಮುಗ್ಧ ನಾಗರಿಕರ ಮೇಲೆ ಅಡವಿ ಕಡೆಯಿಂದ ಬಂದ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿ ಹತ್ಯಾಕಾಂಡ ನಡೆಸಿದ್ದರು.

ಈ ದಾಳಿ ಬಳಿಕ ಕಾಶ್ಮೀರ ಪ್ರವಾಸ ಮಾಡಲು ಜನ ಹಿಂದೇಟು ಹಾಕುತ್ತಿದ್ದರು. ಇದರಿಂದ ಪ್ರವಾಸೋದ್ಯಮವನ್ನೇ ನಂಬಿಕೊಂಡಿದ್ದ ಜಮ್ಮು ಕಾಶ್ಮೀರ ಜನರಿಗೆ ಕೊಂಚ ಹೊಡೆತ ನೀಡಿತ್ತು. ಆದರೆ ಈ ಘಟನೆಯಾದ ಬಳಿಕ ಕಾಶ್ಮೀರದಲ್ಲಿ ಪ್ರವಾಸೀ ತಾಣಗಳಿಗೆ ಭದ್ರತೆ ಹೆಚ್ಚಿಸಲಾಯಿತು. ಇದಾದ ಬಳಿಕ ತುಲಿಪ್ ಗಾರ್ಡನ್ ಸೇರಿದಂತೆ ಇತರೆ ಜಾಗಗಳಿಗೆ ಜನ ಮತ್ತೆ ಬರಲು ಅರಂಭಿಸಿದ್ದರು.

ಇದೀಗ ಪೆಹಲ್ಗಾಮ್ ಗೂ ನಿತ್ಯವೂ ಸಾಕಷ್ಟು ಜನ ಭೇಟಿ ನೀಡುತ್ತಿದ್ದಾರೆ. ಅಂದಿನ ಕಹಿ ಘಟನೆ ಬಳಿಕ ಇಲ್ಲಿ ಭದ್ರತಾ ಸಿಬ್ಬಂದಿ ಗಸ್ತು ಹೆಚ್ಚಿಸಲಾಗಿದೆ. ಈ ಸ್ಥಳದಲ್ಲಿ ಸಿಆರ್ ಪಿಎಫ್ ಯೋಧರು ಮತ್ತು ಸ್ಥಳೀಯ ಪೊಲೀಸರು ಸದಾ ಗಸ್ತು ತಿರುಗುತ್ತಿರುತ್ತಾರೆ. ಇಲ್ಲಿನ ಸಿಬ್ಬಂದಿಗಳಿಗೆ ಕ್ಯೂ ಆರ್ ಕೋಡ್ ಆಧಾರಿತ ದೃಢೀಕರಣ ನೀಡಲಾಗಿದೆ. ಎಂಟ್ರಿ ಪಾಯಿಂಟ್ ಗಳಲ್ಲಿ ಭದ್ರತೆ ನಿಯೋಜಿಸಲಾಗಿದೆ. ಇದೀಗ ಪೆಹಲ್ಗಾಮ್ ದಾಳಿಗೆ ಒಂದು ವರ್ಷವಾದ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕಾಶ್ಮೀರದ ಪ್ರವಾಸೀ ತಾಣಗಳಲ್ಲಿ ಮತ್ತಷ್ಟು ಭದ್ರತೆ ಹೆಚ್ಚಿಸಲಾಗಿದ್ದು ಯೋಧರು ಕಟ್ಟೆಚ್ಚರ  ವಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments