Tehawwur Rana: ಉಗ್ರ ತೆಹವ್ವೂರ್ ರಾಣಾ ಭೇಟಿಗೆ ಹನ್ನೆರಡೇ ಜನರಿಗೆ ಅವಕಾಶ: ಹೇಗಿದೆ ಉಗ್ರನ ಇರಿಸಿರುವ ಕೊಠಡಿ

Krishnaveni K
ಶನಿವಾರ, 12 ಏಪ್ರಿಲ್ 2025 (09:30 IST)
ನವದೆಹಲಿ: 2008 ರ ಮುಂಬೈ ದಾಳಿಯ ಪ್ರಮುಖ ರೂವಾರಿ ಉಗ್ರ ತಹವ್ವೂರ್ ರಾಣಾನನ್ನು ಈಗ ಎನ್ಐಎ ತೀವ್ರ ವಿಚಾರಣೆ ನಡೆಸುತ್ತಿದೆ. ಈತನನ್ನು ಇರಿಸಿರುವ ಬಂಧನದ ಕೊಠಡಿಗೆ ಕೇವಲ 12 ಜನರಿಗೆ ಮಾತ್ರ ಭೇಟಿಗೆ ಅವಕಾಶವಿದೆ. ಹೇಗಿದೆ ಆತನ ಕೊಠಡಿ ಇಲ್ಲಿದೆ  ವಿವರ.

ಅಮೆರಿಕಾದಿಂದ ಗಡೀಪಾರಾದ ಉಗ್ರ ರಾಣಾನನ್ನು ಎನ್ಐಎ ಅಧಿಕಾರಿಗಳು ಮೊನ್ನೆಯಷ್ಟೇ ಭಾರತಕ್ಕೆ ಕರೆತಂದು ಕೋರ್ಟ್ ಗೆ ಹಾಜರುಪಡಿಸಿದ್ದರು. ಇದೀಗ ಎನ್ ಐಎ ಕಸ್ಟಡಿಯಲ್ಲಿರುವ ಆತನನ್ನು ಮುಂಬೈ ದಾಳಿ ಕುರಿತಾಗಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಈತನನ್ನು ಭದ್ರತಾ ಕಾರಣಗಳಿಂದ ಕಟ್ಟುನಿಟ್ಟಿನ ಬಿಗಿ ಬಂದೋಬಸ್ತ್ ನಲ್ಲಿರಿಸಲಾಗಿದೆ. ಎನ್ಐಎ ಕಚೇರಿ ಈಗ ಜೈಲಿನಂತಾಗಿದೆ. ಈತನನ್ನು 14*14 ಅಳತೆಯ ಕೊಠಡಿಯಲ್ಲಿರಿಸಲಾಗಿದೆ. ಇಲ್ಲಿಗೆ ಸಿಸಿಟಿವಿ ಕಣ್ಗಾವಲು ಇದ್ದು, ಆತನ ಎಲ್ಲಾ ಚಲನವಲನಗಳನ್ನು ಪ್ರತೀಕ್ಷಣವೂ ಗಮನಿಸಲಾಗುತ್ತಿದೆ.

ಆತನನ್ನು ಇರಿಸಿರುವ ಎನ್ಐಎ ಕಚೇರಿಯ ಹೊರಭಾಗದಲ್ಲಿ ದೆಹಲಿ ಪೊಲೀಸರು, ಅರೆಸೈನಿಕ ಪಡೆಯಿಂದ ಬಿಗಿ ಭದ್ರತೆ ಒದಗಿಸಲಾಗಿದೆ. ನೆಲದ ಮೇಲೆಯೇ ಹಾಸಿಗೆ ಹಾಕಿಕೊಡಲಾಗಿದೆ. ಅಲ್ಲಿಯೇ ಊಟ, ಸ್ನಾನ, ಶೌಚಕ್ಕೆ ವ್ಯವಸ್ಥೆ ಮಾಡಲಾಗಿದೆ. ಈತನನ್ನು ಭೇಟಿ ಮಾಡಲು ಕೇವಲ 12 ಜನ ಅಧಿಕಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದರ ಹೊರತಾಗಿ ಆತನಿಗೆ ಹೊರಜಗತ್ತಿನ ಸಂಪರ್ಕವೇ ಇಲ್ಲದಂತೆ ನೋಡಿಕೊಳ್ಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments