ಏಳು ವರ್ಷದ ಪ್ರದ್ಯುಮ್ನನ್ನು ಕೊಲೆ ಮಾಡಿದ್ದು ಹೇಗೆ? ಕೊಲೆ ಆರೋಪಿ ವಿದ್ಯಾರ್ಥಿ ಬಿಚ್ಚಿಟ್ಟ ರಹಸ್ಯ!

Webdunia
ಶುಕ್ರವಾರ, 10 ನವೆಂಬರ್ 2017 (09:26 IST)
ನವದೆಹಲಿ: ರಿಯಾನ್ ಇಂಟರ್ನಾಷನಲ್ ಶಾಲೆ ವಿದ್ಯಾರ್ಥಿ 7 ವರ್ಷದ ಬಾಲಕ ಪ್ರದ್ಯುಮ್ನ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಕೊಲೆ ಆರೋಪದಲ್ಲಿ ಬಂಧಿತನಾದ 11 ನೇ ತರಗತಿ ವಿದ್ಯಾರ್ಥಿ ಕೊಲೆ ಮಾಡಿರುವುದಾಗಿ ಸಿಬಿಐ ತಂಡದ ಮುಂದೆ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

 
ಹರ್ಯಾಣ ಪೊಲೀಸರು ಈ ಘಟನೆಯಲ್ಲಿ ಬಸ್ ಕಂಡಕ್ಟ್ ಆರೋಪಿ ಎಂದು ಆತನನ್ನು ಬಂಧಿಸಿದ್ದರು. ಆದರೆ ಸಿಬಿಐ ತನಿಖೆ ಕೈಗೆತ್ತಿಕೊಂಡ ಬಳಿಕ 11 ನೇ ತರಗತಿ ವಿದ್ಯಾರ್ಥಿಯೇ ಕೊಲೆ ಮಾಡಿದಾತ ಎಂದು ತಿಳಿದುಬಂದಿತ್ತು.

ಪರೀಕ್ಷೆ ಮುಂದೊಡ್ಡುವ ನೆಪದಲ್ಲಿ 7 ವರ್ಷದ ಬಾಲಕ ಪ್ರದ್ಯುಮ್ನನ್ನು ಆತ ಕೊಲೆ ಮಾಡಿದ್ದ ಎಂದು ಹೇಳಲಾಗಿದೆ. ತನ್ನ ತಂದೆ ಮತ್ತು ಸ್ವತಂತ್ರ ಸಾಕ್ಷಿದಾರರ ಸಮ್ಮುಖದಲ್ಲಿ ಸಿಬಿಐ ತಂಡದ ಎದುರು ಆತ ಈ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಕೊಲೆ ಬಗ್ಗೆ ವಿವರಿಸಿದ್ದಾನೆ ಎನ್ನಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ಆರೋಪಿ ಸೋಹ್ನಾ ಮಾರ್ಕೆಟ್ ನಿಂದ ಕೊಲೆ ಮಾಡಲು ಚಾಕು ಖರೀದಿಸಿದ್ದ. ನಂತರ ಶಾಲೆಯ ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಪ್ರದ್ಯುಮ್ನನ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಎನ್ನಲಾಗಿದೆ. ಸಿಸಿಟಿವಿ ಫೂಟೇಜ್ ಮತ್ತು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳ ವಿಚಾರಣೆ ಆಧರಿಸಿ ಸಿಬಿಐ ತನಿಖೆ ನಡೆಸಿತ್ತು. ಇದೀಗ ಆರೋಪಿ ತಪ್ಪೊಪ್ಪಿಕೊಂಡಿದ್ದು, ಆತನಿಗೆ ಜೀವಾವಧಿ ಶಿಕ್ಷೆ ಸಿಗುವವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ಪ್ರದ್ಯುಮ್ನ ಪರ ವಕೀಲರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೆಜಿಲ್ ಮಾಡೆಲ್ ನಿಂದ ವೋಟ್ ಎಂದ ರಾಹುಲ್ ಗಾಂಧಿ: ಇಟೆಲಿ ಮಹಿಳೆಯೂ ಮಾಡಿಲ್ವಾ ಎಂದ ಬಿಜೆಪಿ

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು: ಪ್ರಧಾನಿ ಮೋದಿ ಮಾಡಿದ ಮನವಿಯೇನು

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments