Select Your Language

Notifications

webdunia
webdunia
webdunia
webdunia

ಕೇರಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಸುರೇಶ್ ಗೋಪಿ ಮೇಲೆ ಜನರಿಗ್ಯಾಕೆ ಒಲವು

Suresh Gopi

Krishnaveni K

ತ್ರಿಶ್ಶೂರ್ , ಮಂಗಳವಾರ, 4 ಜೂನ್ 2024 (14:27 IST)
ತ್ರಿಶ್ಶೂರ್: ಕೇರಳದಲ್ಲಿ ಮೊದಲ ಬಾರಿಗೆ ಕಮಲವರಳಿದೆ. ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ತ್ರಿಶ್ಶೂರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ನಟ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ.

ಈ ಮೂಲಕ ಅವರು ಹೊಸ ದಾಖಲೆಯನ್ನೇ ಮಾಡಿದ್ದಾರೆ. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇರಳದಲ್ಲಿ ಬಿಜೆಪಿ ಮತ ಪ್ರಮಾಣ ಹೆಚ್ಚಿಸಿಕೊಂಡಿತ್ತು. ಇಡೀ ದೇಶದಲ್ಲೇ ಭರ್ಜರಿ ಬಹುಮತ ಸಾಧಿಸಿದ್ದರೂ ಕೇರಳದಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿರಲಿಲ್ಲ.

ಆದರೆ ಇದೇ ಮೊದಲ ಬಾರಿಗೆ ದೇವರನಾಡಿನಲ್ಲಿ ಕಮಲವರಳಿಸಲು ಸುರೇಶ್ ಗೋಪಿ ಯಶಸ್ವಿಯಾಗಿದ್ದಾರೆ. ಸುರೇಶ್ ಗೋಪಿ ಈ ಮೊದಲು ರಾಜ್ಯಸಭೆ ಸಂಸದರಾಗಿ ಕೆಲಸ ಮಾಡಿದ್ದರು. ಸ್ಥಳೀಯವಾಗಿ ಉತ್ತಮ ಕೆಲಸಗಾರ ಎಂಬ ಖ್ಯಾತಿ ಹೊಂದಿದ್ದಾರೆ.

ಜೊತೆಗೆ ಸಿನಿಮಾ ನಟನಾಗಿ ಜನರ ಪ್ರೀತಿ ಗಳಿಸಿದ್ದವರು. ಹೀಗಾಗಿ ಸುರೇಶ್ ಗೋಪಿಗೆ ಗೆಲ್ಲಲು ಸಾಧ್ಯವಾಗಿದೆ. ಕೇರಳದ ತಿರುವನಂತಪುರಂನಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿಯಿತ್ತು. ಕಾಂಗ್ರೆಸ್ ಅಭ್ಯರ್ಥಿ ಶಶಿ ತರೂರ್ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಆರಂಭಿಕ ಮುನ್ನಡೆ ಹೊಂದಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಜೊತೆ ಮೋದಿ, ಅಮಿತ್ ಶಾ ಮಾತುಕತೆ