Webdunia - Bharat's app for daily news and videos

Install App

ಪ್ರಧಾನ ಮಂತ್ರಿ ಉಚಿತ ಪಡಿತರ ಯೋಜನೆಗೆ ಯಾರು ಅರ್ಹರು ಮತ್ತು ಅರ್ಜಿ ಸಲ್ಲಿಸುವುದು ಹೇಗೆ

Krishnaveni K
ಮಂಗಳವಾರ, 16 ಜುಲೈ 2024 (10:41 IST)
ನವದೆಹಲಿ: ಕಳೆದ ವರ್ಷ ಮೋದಿ ಸರ್ಕಾರ ಜಾರಿಗೆ ತಂದ ಪ್ರಧಾನ ಮಂತ್ರಿ ಗರೀಬಿ ಕಲ್ಯಾಣ ಅನ್ನ ಯೋಜನೆಯನ್ನು ಈ ಅವಧಿಯಲ್ಲೂ ಮುಂದುವರಿಸುವುದಾಗಿ ಇದೀಗ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಘೋಷಿಸಿದ್ದಾರೆ. ಈ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ 5 ಕೆಜಿ ಉಚಿತ ಪಡಿತರ ಸಿಗಲಿದೆ.

ಹಾಗಿದ್ದರೆ ಈ ಯೋಜನೆಗೆ ಯಾರು ಅರ್ಹರು, ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರ ಇಲ್ಲಿದೆ ನೋಡಿ. ಅನ್ನ ಯೋಜನೆಯಡಿ ಸುಮಾರು 80 ಕೋಟಿ ಜನತೆಗೆ ಪ್ರಯೋಜನವಾಗಿದೆ. ಇಷ್ಟು ಜನ ಬಡತನದಿಂದ ಮೇಲೇಳಲು ಸಾಧ್ಯವಾಗಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಈ ಯೋಜನೆಗೆ ಯಾರು ಅರ್ಹರು?
ವಿಧವೆಯರು ಮುಖ್ಯಸ್ಥರಾಗಿರುವ ಕುಟುಂಬ ಅಥವಾ 60 ವರ್ಷ ಮೇಲ್ಪಟ್ಟ ದುಡಿಯಲು ಸಾಧ್ಯವಾಗದ ಅಥವಾ ಅನಾರೋಗ್ಯಕ್ಕೀಡಾದ ಬಡ ಕುಟುಂಬಗಳಿಗೆ ಈ ಯೋಜನೆ ಅನ್ವಯವಾಗುತ್ತದೆ
ಇದನ್ನು ಆಯಾ ಸ್ಥಳೀಯಾಡಳಿತವೇ ತೀರ್ಮಾನಿಸುತ್ತದೆ.
ಎಲ್ಲಾ ಬುಡಕಟ್ಟು ಜನಾಂಗದವರಿಗೆ ಈ ಯೋಜನೆ ಸಿಗಲಿದೆ
ಬಡ ಕೂಲಿ ಕಾರ್ಮಿಕರು, ಸ್ವಂತ ಜಮೀನಿಲ್ಲದೇ ಇನ್ನೊಬ್ಬರ ಜಮೀನಿನಲ್ಲಿ ದುಡಿಯುವ ಕೃಷಿಕರು, ಕುಶಲ ಕರ್ಮಿಗಳು, ನೇಕಾರರು, ಕಮ್ಮಾರರು, ಬಡಗಿಗಳು, ದಿನಗೂಲಿ ನೌಕರರು ಈ ಯೋಜನೆಗೆ ಅರ್ಹರು.
ಎಚ್ಐವಿ ಸೋಂಕಿತ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ನಿಮ್ಮ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಬೇಕಾಗುತ್ತದೆ. ನಿಮ್ಮ ಪಕ್ಕದ ನ್ಯಾಯ ಬೆಲೆ ಅಂಗಡಿಗೆ ತೆರಳಿ ಅರ್ಜಿ ಸಲ್ಲಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಮುಂದಿನ ಸುದ್ದಿ
Show comments