Webdunia - Bharat's app for daily news and videos

Install App

ಅಯೋಧ್ಯೆ ರಾಮಮಂದಿರದಲ್ಲಿ ಆರತಿಗೆ ಆನ್ ಲೈನ್ ನಲ್ಲೇ ಬುಕಿಂಗ್ ಮಾಡುವುದು ಹೇಗೆ?

Webdunia
ಶನಿವಾರ, 30 ಡಿಸೆಂಬರ್ 2023 (13:27 IST)
ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಶುರುವಾಗಿದೆ. ಇದೀಗ ರಾಮಮಂದಿರ ಟ್ರಸ್ಟ್ ಶ್ರೀರಾಮಚಂದ್ರನಿಗೆ ಆರತಿ ಬೆಳಗಲು ವಿಶೇಷ ಪಾಸ್ ವ್ಯವಸ್ಥೆ ಮಾಡಿದೆ.

ಭಕ್ತಾದಿಗಳು ಶ್ರೀರಾಮನಿಗೆ ಆರತಿ ಸೇವೆ ಮಾಡಲು ರಾಮಮಂದಿರ ಟ್ರಸ್ಟ್ ಪಾಸ್ ಒದಗಿಸಲಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಮೊದಲು ಆರತಿ ಸೇವೆ ಮಾಡಿಸಬಹುದಾಗಿದೆ.

ಇದಕ್ಕಾಗಿ ಆನ್ ಲೈನ್ ನಲ್ಲೇ ಬುಕಿಂಗ್ ಮಾಡಿ ಪಾಸ್ ಪಡೆದುಕೊಳ್ಳಬಹುದಾಗಿದೆ. ಆರತಿಗೆ ಹಾಜರಾಗಲು ಬಯಸುವ ವ್ಯಕ್ತಿಗಳು ಆನ್ ಲೈನ್ ನಲ್ಲಿ ಪಾಸ್ ಪಡೆಯಬಹುದು. ಮೂರು ಆರತಿಗಳಿಗೆ ತಲಾ 20 ಪಾಸ್ ಒದಿಗಿಸಲಾಗುತ್ತದೆ. ಭಗವಾನ್ ಶ್ರೀರಾಮಚಂದ್ರನಿಗೆ ದಿನಕ್ಕೆ ಮೂರು ಬಾರಿ ಆರತಿ ಮಾಡಲಾಗುತ್ತದೆ. ಪಾಸ್ ಮಾಡಿಸಿಕೊಂಡವರು ಆರತಿಯಲ್ಲಿ ಭಾಗಿಯಾಗಬಹುದಾಗಿದೆ. ಪಾಸ್ ನೊಂದಿಗೆ ಪ್ರತೀ ಆರತಿಯಲ್ಲಿ 30 ಮಂದಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.

ಅದಕ್ಕಾಗಿ ಪ್ರತ್ಯೇಕ ವೆಬ್ ಸೈಟ್ ಇದೆ. srjbtkshetra.org ಎಂಬ ವೆಬ್ ಸೈಟ್ ವಿಳಾಸದಲ್ಲಿ ಪಾಸ್ ಬುಕ್ ಮಾಡಬಹುದು. ಆರತಿ ವಿಭಾಗವನ್ನು ಕ್ಲಿಕ್ ಮಾಡಿ ನೀವು ಹಾಜರಾಗುವ ಆರತಿ ದಿನಾಂಕ, ಸಮಯವನ್ನು ಆಯ್ಕೆ ಮಾಡಬೇಕು. ನಿಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮುಂತಾದ ಮಾಹಿತಿ ಕಡ್ಡಾಯವಾಗಿ ಒದಗಿಸಬೇಕು. ಬಳಿಕ ಕೌಂಟರ್ ನಿಂದ ನಿಮ್ಮ ಪಾಸ್ ಗಳನ್ನು ಸಂಗ್ರಹಿಸಿ ಆರತಿ ಸಮಾರಂಭದಲ್ಲಿ ಭಾಗಿಯಾಗಬಹುದು. ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ ಮತ್ತು ಪಾಸ್ ಪೋರ್ಟ್ ಈ ನಾಲ್ಕರಲ್ಲಿ ಯಾವುದಾದರೂ ಒಂದು ದಾಖಲೆ ಅಗತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments