ಕಿಸಾನ್ ಸಮ್ಮಾನ್ ಯೋಜನೆ ಪಡೆಯಲು ಇಲ್ಲಿ ಕೆವೈಸಿ ಮಾಡಿಸಿಕೊಳ್ಳಬಹುದು

Krishnaveni K
ಶುಕ್ರವಾರ, 16 ಆಗಸ್ಟ್ 2024 (10:18 IST)
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ ಯೋಜನೆಯ 18 ನೇ ಕಂತಿನ ಹಣ ಪಡೆಯಲು ಕೆವೈಸಿ ಮಾಡಿಸಿಕೊಳ್ಳಬೇಕೆಂದರೆ ಎಲ್ಲಿಗೆ ಭೇಟಿ ನೀಡಬೇಕು ನೋಡಿ.

ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ ರೈತರ ಖಾತೆಗೆ ಕೇಂದ್ರ ಸರ್ಕಾರ 6 ಸಾವಿರ ರೂ. ಹಣ ಜಮೆ ಮಾಡುತ್ತಿದೆ. ಈಗಾಗಲೇ 17 ಕಂತಿನ ಹಣ ಪಾವತಿಯಾಗಿದ್ದು ಒಟ್ಟು 34 ಸಾವಿರ ರೂ. ಜಮೆ ಮಾಡಲಾಗಿದೆ. ಮಧ್ಯವರ್ತಿಗಳಿಲ್ಲದೇ ನೇರವಾಗಿ ರೈತರ ಖಾತೆಗೇ ಹಣ ವರ್ಗಾವಣೆ ಮಾಡಲಾಗುತ್ತಿದೆ.

ಪ್ರತೀ ವರ್ಷ ಮೂರು ಕಂತುಗಳಲ್ಲಾಗಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವನ್ನು ರೈತರ ಖಾತೆಗೆ ಹಾಕಲಾಗುತ್ತಿದೆ. ಇದರಲ್ಲಿ ಮೊದಲನೇ ಕಂತನ್ನು ಏಪ್ರಿಲ್ ನಿಂದ ಜುಲೈ ಅವಧಿಯಲ್ಲಿ ನೀಡಲಾಗಿದೆ. ಇದೀಗ ಎರಡನೇ ಕಂತಿನ ಹಣವನ್ನು ಆಗಸ್ಟ್ ನಿಂದ ನವಂಬರ್ ಒಳಗಾಗಿ ಹಾಕಲಾಗುತ್ತದೆ.

ಇದಕ್ಕೆ ಮೊದಲು ನಿಮ್ಮ ಕೆವೈಸಿ ಅಪ್ ಡೇಟ್ ಮಾಡಿಕೊಳ್ಳಬೇಕಾಗುತ್ತದೆ. ಇಲ್ಲದೇ ಹೋದರೆ ಖಾತೆಗೆ ಹಣ ಬಾರದು. ಹೀಗಾಗಿ ತಕ್ಷಣವೇ ಪಿಎಂ ಕಿಸಾನ್ ಯೋಜನೆಯ ಖಾತೆಗೆ ವಿವಿಧ 3 ವಿಧಾನಗಳ ಆಧಾರಿತ ಇ-ಕೆವೈಸಿ ಅಪ್ ಡೇಟ್ ಮಾಡಿಸಲು ನಿಮ್ಮ ಹತ್ತಿರದ ನಾಗರಿಕ ಸೇವಾ ಕೇಂದ್ರಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅಪ್ ಡೇಟ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಮುಂದಿನ ಸುದ್ದಿ
Show comments