Webdunia - Bharat's app for daily news and videos

Install App

ಮಹಿಳಾ ಸಹೋದ್ಯೋಗಿಯ ಜತೆ ಅಸಭ್ಯವಾಗಿ ವರ್ತನೆ: ನ್ಯಾಯಾಧೀಶರ ಅಮಾನತು

Webdunia
ಗುರುವಾರ, 2 ಜುಲೈ 2015 (17:48 IST)
ಹಿಮಾಚಲ ಪ್ರದೇಶದ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ಮತ್ತು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಒಬ್ಬರು ಮಹಿಳಾ ಸಹೋದ್ಯೋಗಿ ನೀಡಿದ ದೂರಿನ ಪರಿಣಾಮ ಅಮಾನತುಗೊಂಡಿದ್ದಾರೆ. 
 
"ಜೂನ್ 11 ರಿಂದ ಜೂನ್ 13 ರವರೆಗೆ ಮನಾಲಿಯಲ್ಲಿ ನಡೆದ ಸಮಾವೇಶದ ಸಂದರ್ಭದಲ್ಲಿ ನ್ಯಾಯಾಧೀಶರು ನನಗೆ ಹಿಂಸೆ ನೀಡಿದ್ದರು", ಎಂದು ಮಹಿಳೆ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ  ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಸಿವಿಲ್ ನ್ಯಾಯಾಧೀಶರನ್ನು ಅಮಾನತುಗೊಳಿಸಿದ್ದಾರೆ. 
 
ಘಟನೆಯ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಮುಖ್ಯ ನ್ಯಾಯಮೂರ್ತಿ ಮನ್ಸೂರ್ ಅಹಮದ್ ಮಿರ್ ಎರಡು ತಿಂಗಳೊಳಗೆ ಈ ಕುರಿತ ಸಂಪೂರ್ಣ ತನಿಖಾ ವರದಿ ತಮ್ಮ ಮುಂದಿರಬೇಕು ಎಂದು ಆದೇಶ ನೀಡಿದ್ದಾರೆ.
 
ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಆಶ್ರಯದಲ್ಲಿ ಹಿಮಾಚಲ ಪ್ರದೇಶದ ರಾಜ್ಯ ಕಾನೂನು ಸೇವೆ ಪ್ರಾಧಿಕಾರ, ಹೊಟೆಲ್ ಅಂಬಾಸಿಡರ್, ಮನಾಲಿಯಲ್ಲಿ 'ಭಾರತದಲ್ಲಿ ಡ್ರಗ್ ಮೆನೇಸ್-  "ಅವಲೋಕನ, ಸವಾಲುಗಳು ಮತ್ತು ಪರಿಹಾರಗಳು', ಎಂಬ ವಿಷಯದಲ್ಲಿ ಸಮಾವೇಶವನ್ನು ನಡೆಸಿತ್ತು.  ಪಂಜಾಬ್, ಚಂಡೀಘಢ, ಹರಿಯಾಣ, ದೆಹಲಿ, ಉತ್ತರಾಖಂಡ್ ಮತ್ತು ರಾಜಸ್ಥಾನದ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರು ಮತ್ತು ಹಿಮಾಚಲ ಪ್ರದೇಶದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ಅಧ್ಯಕ್ಷರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments