Select Your Language

Notifications

webdunia
webdunia
webdunia
webdunia

ಆರೆಸ್ಸೆಸ್ ಕ್ಷಮೆಯಾಚಿಸುವಂತೆ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಆದೇಶ

ರಾಹುಲ್ ಗಾಂಧಿ
ನವದೆಹಲಿ , ಮಂಗಳವಾರ, 19 ಜುಲೈ 2016 (12:40 IST)
ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ವಿರುದ್ಧ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಇದೀಗ ಸುಪ್ರೀಂಕೋರ್ಟ್, ರಾಹುಲ್ ಗಾಂಧಿಗೆ ಆರೆಸ್ಸೆಸ್ ಕ್ಷಮೆ ಕೋರುವಂತೆ ಆದೇಶಿಸಿದೆ. 
 
ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎನ್ನುವ ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸಿದ ಕೋರ್ಟ್, ರಾಹುಲ್ ಗಾಂಧಿ ಆರೆಸ್ಸೆಸ್ ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ ವಿಚಾರಣೆ ಎದುರಿಸಲಿ ಎಂದು ಆದೇಶ ನೀಡಿದೆ.
 
ನೀವು ಜನತೆಯ ಏಳಿಗೆಗಾಗಿ ಹೇಳಿಕೆ ನೀಡುತ್ತಿರೋ ಅಥವಾ ರಾಜಕೀಯ ಕಾರಣಗಳಿಗಾಗಿ ಹೇಳಿಕೆ ನೀಡುತ್ತಿರೋ ಎನ್ನುವ ಬಗ್ಗೆ ಪ್ರಕರಣ ನಿರ್ಧಾರವಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
 
ಆರೆಸ್ಸೆಸ್ ಆಗಲಿ ಅಧವಾ ಬೇರಾವುದೋ ಸಂಸ್ಥೆಯ ವಿರುದ್ಧವಾಗಲಿ ಸಾಕ್ಷಾಧಾರಗಳಿಲ್ಲದೇ ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದೆ. 
 
ಸುಪ್ರೀಂಕೋರ್ಟ್ ಜುಲೈ 27 ರವರೆಗೆ ರಾಹುಲ್ ಗಾಂಧಿಗೆ ವಿವರಣೆ ನೀಡುವಂತೆ ಕೋರ್ಟ್ ಆದೇಶಿಸಿದೆ. ಇದಕ್ಕಿಂತ ಮೊದಲು, ರಾಹುಲ್ ಗಾಂಧಿ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿ ಪ್ರಕರಣ ರದ್ದುಗೊಳಿಸುವಂತೆ ಕೋರಿದ್ದರು.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗಣಪತಿ ಪ್ರಕರಣ ಸಿಬಿಗೆ ವಹಿಸುವವರೆಗೆ ಹೋರಾಟ: ಯಡ್ಡಿ ಘೋಷಣೆ