Webdunia - Bharat's app for daily news and videos

Install App

ಮಹಿಳೆ ಯಾವುದೇ ವೃತ್ತಿಯಲ್ಲಿದ್ದರೂ ಘನತೆಗೆ ಅರ್ಹಳು: ಸುಪ್ರಿಯಾ ಹೇಳಿಕೆಯಿಂದ ನೋವಾಗಿದೆ ಎಂದ ರಂಗನಾ ರಣಾವತ್

Sampriya
ಮಂಗಳವಾರ, 26 ಮಾರ್ಚ್ 2024 (14:48 IST)
Photo Courtesy X
ಪಂಜಾಬ್:  ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟೆ ಅವರ ಪೋಸ್ಟ್‌ನಿಂದ ನನಗೆ ನೋವಾಗಿದೆ ಎಂದು ಬಾಲಿವುಡ್ ನಟಿ, ಮಂಡಿ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್  ಹೇಳಿದ್ದಾರೆ.

ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಬಳಿ ಮಾತನಾಡಿದ ಅವರು, ಪ್ರತಿಯೊಬ್ಬ ಮಹಿಳೆಯುವ ಯಾವುದೇ ವೃತ್ತಿಯಲ್ಲಿದ್ದರೂ ಘನತೆಗೆ ಅರ್ಹಳಾಗಿರುತ್ತಾಳೆ. ನನಗೆ ಹೆಚ್ಚು ನೋಯಿಸಿದ್ದು ಮಂಡಿ ವಿಷಯವಾಗಿದೆ ಎಂದರು.

ಇನ್ನೂ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಂಗನಾ ರಣಾವತ್ ಅವರ ಅರೆ ಬಟ್ಟೆಯ ಫೋಟೋವನ್ನು ಶೇರ್ ಮಾಡಿ, ಕೇವಲವಾಗಿ ಬರೆದಿದ್ದರು.

ಇವರ ಈ ಹೇಳಿಕೆಗೆ ಬಿಜೆಪಿ ನಾಯಕರು ಸೇರಿದಂತೆ ಅನೇಕರು ವಿರೋಧವನ್ನು ವ್ಯಕ್ತಪಡಿಸಿದರು. ವಿಷಯ ಗಂಭೀರವಾಗುತ್ತಿದ್ದ ಹಾಗೇ ಸುಪ್ರಿಯಾ ಶ್ರಿನಾಟೆ ಅವರು ತನ್ನ ಸೋಷಿಯಲ್ ಮೀಡಿಯಾ ಹ್ಯಾಂಡಲ್ ಅನ್ನು ಹ್ಯಾಕ್ ಮಾಡಲಾಗಿದೆ ಮತ್ತು ತಾನು ಎಂದಿಗೂ ಇನ್ನೊಬ್ಬ ಮಹಿಳೆಯನ್ನು ಕೀಳಾಗಿ ಕಾಣುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ನಂತರ ಕಾಂಗ್ರೆಸ್‌ ನಾಯಕಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರನೌತ್ ಹೇಳಿದ್ದಾರೆ. ಘಟನೆ ಸಂಬಂಧ ನಡ್ಡಾ ಅವರು ದೆಹಲಿಗೆ ಕರೆದಿರುವುದಾಗಿ ರಣಾವತ್ ಹೇಳಿದ್ದಾರೆ.


<>

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments