Webdunia - Bharat's app for daily news and videos

Install App

ತವರು ಮನೆಗೆ ಹೋಗುತ್ತೇನೆಂದು ಹಠ ಮಾಡಿದ ಹೆಂಡತಿಯನ್ನು ಗಂಡ ಏನ್ ಮಾಡ್ದಾ ಗೋತ್ತ!

Webdunia
ಗುರುವಾರ, 23 ಡಿಸೆಂಬರ್ 2021 (09:03 IST)
ನವದೆಹಲಿ : ಉತ್ತರ ಪ್ರದೇಶದ ( ಸಹರಾನ್‌ಪುರದ ಟೆಲಿಪುರಾ ಪ್ರದೇಶದಲ್ಲಿರುವ ಮಹಿಳೆಯೊಬ್ಬರು ತನ್ನ ತವರುಮನೆಗೆ ಹೋಗಬೇಕೆಂದು ಒತ್ತಾಯ ಮಾಡಿದ್ದರಿಂದ 24 ವರ್ಷದ ವ್ಯಕ್ತಿ ತನ್ನ ಹೆಂಡತಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ.

24 ವರ್ಷದ ಆರೋಪಿ ಕಲೀಂ ಅಲಿ ತನ್ನ 22 ವರ್ಷದ ಶಮಾ ಎಂಬ ಯುವತಿಯನ್ನು ಕೊಲೆ ಮಾಡಿದಾತ.
ಟೈಮ್ಸ್ ಆಫ್ ಇಂಡಿಯಾದಲ್ಲಿ ಪ್ರಕಟವಾದ ವರದಿ ಪ್ರಕಾರ, ಆರೋಪಿಯನ್ನು ಕಲೀಂ ಅಲಿ ಎಂದು ಗುರುತಿಸಲಾಗಿದೆ.

ಆತ ಶಮಾಳನ್ನು ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ. ಕೆಲೀಮ್ ಅಲಿ ತನ್ನ ಹೆಂಡತಿ ಆಗಾಗ ತನ್ನ ತಂದೆ-ತಾಯಿಯ ಮನೆಗೆ ಆಗಾಗ ಭೇಟಿ ನೀಡುತ್ತಿದ್ದರಿಂದ ಹತಾಶೆಗೊಂಡಿದ್ದ. ಶಮಾಳ ಸಹೋದರರು ಕೂಡ ಕೆಲೀಮ್‌ನೊಂದಿಗೆ ಆಕೆಯ ಪೋಷಕರ ಮನೆಗೆ ಭೇಟಿ ನೀಡಲು ಅವಕಾಶ ನೀಡುವ ಬಗ್ಗೆ ತೀವ್ರ ವಾಗ್ವಾದ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಲೀಂ ಅವರ ನೆರೆಹೊರೆಯವರು ಮಾಹಿತಿ ನೀಡಿದ ಪ್ರಕಾರ, ಮಂಗಳವಾರ ಬೆಳಿಗ್ಗೆ ಮನೆಯೊಳಗೆ ಶಮಾ ಅವರ ಅಳು ಮತ್ತು ಕಿರುಚಾಟವನ್ನು ಕೇಳಿದಾಗ ಅಕ್ಕಪಕ್ಕದವರು ಬಾಗಿಲು ಬಡಿದಿದ್ದಾರೆ. ಅವರು ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಸ್ವಲ್ಪ ಸಮಯದ ನಂತರ, ನೆರೆಹೊರೆಯವರು ಕೆಲೀಮ್ ಮನೆಯಿಂದ ಹೊರಬರುವುದನ್ನು ನೋಡಿದರು.

ಪ್ರತ್ಯಕ್ಷದರ್ಶಿಗಳ ಪ್ರಕಾರ, ತನ್ನ ಮನೆಯಿಂದ ಹೊರಡುವಾಗ ಕಲೀಂ, ಇನ್ನು ನಿನ್ನೆ ತವರು ಮನೆಯಲ್ಲಿ ಇರು ಎಂದು ಕಿರುಚಾಡಿದ್ದಾರೆ. ಈ ಬಗ್ಗೆ ಸಹರಾನ್‌ಪುರ್ ಎಸ್‌ಪಿ ರಾಜೇಶ್ ಕುಮಾರ್ ಹೇಳಿಕೆ ನೀಡಿದ್ದು, ಕಲೀಂ ಅವರ ನೆರೆಹೊರೆಯವರು ಮನೆಯೊಳಗೆ ಮಹಿಳೆ ಕಿರುಚುತ್ತಿರುವುದನ್ನು ಕೇಳಿದ್ದಾರೆ.

ಅವರು ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಕಲೀಂ ತನ್ನ ಮನೆಯಿಂದ ಹೊರಗೆ ಹೋಗುವುದನ್ನು ನೋಡಿದ ನಂತರ ಅವರು ಪೊಲೀಸರಿಗೆ ಕರೆ ಮಾಡಿದರು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments