ಇಳಿಗೆಮಣೆಯಿಂದ ಪತ್ನಿ ಮೇಲೆ ಹಲ್ಲೆ ಮಾಡಿದ ಪತಿ !?

Webdunia
ಸೋಮವಾರ, 20 ಜೂನ್ 2022 (14:01 IST)
ನವದೆಹಲಿ : ತರಕಾರಿ ಕತ್ತರಿಸುವ ಇಳಿಗೆಮಣೆಯಿಂದ ಪತ್ನಿ ಮೇಲೆ ಹಲ್ಲೆ ನಡೆಸಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ದೆಹಲಿಯ ನೆಹರು ವಿಹಾರ್ನಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ಮುಂಜಾನೆ 3.40ರ ಸುಮಾರಿಗೆ ದಯಾಲ್ಪುರ ಪೊಲೀಸ್ ಠಾಣೆಗೆ ಈ ಘಟನೆ ಕುರಿತಂತೆ ಮಾಹಿತಿ ದೊರೆತಿದೆ. ಪತಿಯಿಂದ ಹಲ್ಲೆಗೊಳಗಾದ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ. 

ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಗೊಂಡ ಮಹಿಳೆಯನ್ನು ಗುರು ತೇಗ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ವೇಳೆ ಮಹಿಳೆ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ದಂಪತಿಯ ಪುತ್ರಿ ಹೇಳಿಕೆ ಆಧಾರದ ಮೇಲೆ ಇದೀಗ ಆರೋಪಿ ವಿರುದ್ಧ ದಯಾಲ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ವೇಳೆ ಇಳಿಗೆ ಮಣೆಯಿಂದ ಹೊಡೆದಿರುವುದು ಬೆಳಕಿಗೆ ಬಂದಿದೆ.

ವಿಚಾರಣೆ ವೇಳೆ ಆರೋಪಿ ತನ್ನ ಪತ್ನಿಯೊಂದಿಗೆ ಉತ್ತಮ ಸಂಬಂಧ ಹೊಂದಿರಲಿಲ್ಲ ಮತ್ತು ಆಕೆ ಬೇರೆಯವರೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಾಳೆ ಅಂತ ಶಂಕಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಆರೋಪಿ ಈ ಕೃತ್ಯಕ್ಕೆ ಬಳಸಿದ್ದ ಇಳಿಗೆ ಮಣೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯಪ್ರದೇಶ ಸಿಎಂ ಪುತ್ರನ ಮಾದರಿ ನಡೆ: ಸಾಮೂಹಿಕ ವಿವಾಹದಲ್ಲೇ ಹಸೆಮಣೆಯೇರಿದ ಅಭಿಮನ್ಯು ಯಾದವ್‌

ಸಿಎಂ ಭೇಟಿ ಬಳಿಕ ಮತ್ತೇ ಶಾಂತಿ ಮಂತ್ರ ಪಠಿಸಿದ ಡಿಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣ, ರಾಹುಲ್ ಗಾಂಧಿ, ಸೋನಿಯಾ ವಿರುದ್ಧ ಹೊಸ ಪ್ರಕರಣ

ದಿತ್ವಾ ಚಂಡಮಾರುತ, ಶ್ರೀಲಂಕಾದಲ್ಲಿ 132ಮಂದಿ ಸಾವು, 176ಮಂದಿ ನಾಪತ್ತೆ

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಂಪ್ರಮೈಸ್ ಆಗಿರುವುದರ ಹಿಂದಿದ ಸೀಕ್ರೆಟ್ ಇದುವೇ

ಮುಂದಿನ ಸುದ್ದಿ
Show comments