Webdunia - Bharat's app for daily news and videos

Install App

ವಿಷ ಕುಡಿದ ಪತ್ನಿಯನ್ನು ಹೆಗಲ ಮೇಲೆ ಹೊತ್ತು ಓಡಿದರೂ ಬದುಕಿಸಲಾಗದೆ ಪತಿ ಕಣ್ಣೀರು

Webdunia
ಬುಧವಾರ, 3 ಅಕ್ಟೋಬರ್ 2018 (10:01 IST)
ತೆಲಂಗಾಣ: ಬೆಳೆದ ಬೆಳೆ ಕಣ್ಣೆದುರೇ ನಾಶವಾದ ಬೇಸರದಲ್ಲಿ ವಿಷ ಕುಡಿದ ಪತ್ನಿಯನ್ನು ಬದುಕಿಸಲು ತೆಲಂಗಾಣದ ಬುಡಕಟ್ಟು ಪ್ರದೇಶದ ವ್ಯಕ್ತಿಯೊಬ್ಬ ಹೆಗಲ ಮೇಲೆ ಹೊತ್ತು ಆಸ್ಪತ್ರೆಗೆ ಓಡಿದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತೆಲಂಗಾಣದ ರಾಥೋಡ್ ರಾಮ್ ಎಂಬಾತ ತನ್ನ ಪತ್ನಿ ಪುಷ್ಪಲತಾಳನ್ನು ಬದುಕಿಸಲು ಹೆಗಲ ಮೇಲೆ ಹೊತ್ತು ಸುಮಾರು ಮೂರು ಕಿ.ಮೀ. ಓಡಿದ್ದ. ಆದರೂ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆಕೆಯ ಪ್ರಾಣ ಪಕ್ಷಿ ಹಾರಿಹೋಗಿತ್ತು.

ಪಕ್ಕದಲ್ಲಿ ಎಲ್ಲೂ ಆಸ್ಪತ್ರೆಯಿಲ್ಲದ ಕಾರಣ ಕಾಡು ಮೇಡಿನ ಮುಳ್ಳು ಹಾದಿಯಲ್ಲಿ ವಿಷ ಕುಡಿದ ಪತ್ನಿಯನ್ನು ಹೆಗಲ ಮೇಲೆ ಹೊತ್ತು ರಾಮ್ ಓಡಿದ್ದ. ಭಾರೀ ಮಳೆಯಿಂದಾಗಿ ಇವರು ಬೆಳೆದಿದ್ದ ಹತ್ತಿ ಬೆಳೆ ಸಂಪೂರ್ಣ ನಾಶವಾಗಿ ನಷ್ಟವಾಗಿತ್ತು. ಇದೇ ಬೇಸರದಲ್ಲಿ ಪುಷ್ಪಲತಾ ವಿಷ ಸೇವಿಸಿದ್ದಳು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments