Webdunia - Bharat's app for daily news and videos

Install App

ಹೆಂಡತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಹತ್ಯೆಗೈದ ಗಂಡ

Webdunia
ಗುರುವಾರ, 9 ನವೆಂಬರ್ 2023 (11:17 IST)
ನಾನು ಪತ್ನಿ ಮತ್ತು ಪುತ್ರಿಯನ್ನು ಹತ್ಯೆ ಮಾಡಿದ್ದೇನೆ. ನಾನು ಜೈಲಿಗೆ ಹೋದಾಗ ಪೋಲಿಯೋದಿಂದ ಬಳಲುತ್ತಿರುವ ಪುತ್ರಿಯನ್ನು ನೋಡಿಕೊಳ್ಳುವವರು .ಯಾರು ಎನ್ನುವ ಆತಂಕದಿಂದ ನಾನು ಆಕೆಯನ್ನೂ ಕೊಲೆ ಮಾಡಿದ್ದೇನೆ ಎಂದು ಟೇಲರ್ ವೃತ್ತಿಯಲ್ಲಿರುವ ಆರೋಪಿ ಕುಮಾರ್ ನಾಯಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
 
 
ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಆಕೆಯನ್ನು ಹತ್ಯೆ ಮಾಡಿದ್ದಲ್ಲದೇ ಪುತ್ರಿಯನ್ನು ಕೂಡಾ ಹತ್ಯೆ ಮಾಡಿದ 35 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ನಗರದ  ದೆಹಲಿ ನಗರದ ಬಡಾವಣೆಯಲ್ಲಿ ನಡೆದಿದೆ.     
 
ಐದನೇ ಬ್ಲಾಕ್‌ನಲ್ಲಿರುವ ಆರೋಪಿಯ ಮನೆಗೆ ಬಂದ ಪೊಲೀಸರಿಗೆ ಆರೋಪಿಯ ಪತ್ನಿ ಮಂಜುಳಾ ಮತ್ತು ಪುತ್ರಿ ಹರ್ಷಿತಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. 
 
ಪತ್ನಿ ಮತ್ತು ಪುತ್ರಿಯ ಹತ್ಯೆ ಮಾಡಬೇಕು ಎನ್ನುವ ಉದ್ದೇಶದಿಂದ ತನ್ನ ಮತ್ತೊಬ್ಬ ಪುತ್ರನನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಬಂದಿದ್ದಾನೆ.
 
10 ವರ್ಷಗಳ ಹಿಂದೆ ನಮ್ಮ ಮದುವೆಯಾಗಿತ್ತು. ದೆಹಲಿಯ ಪಹಾಡ್‌ ಗಂಜ್ ಪ್ರದೇಶದಲ್ಲಿ ವಾಸವಾಗಿದ್ದೆವು. ಆರಂಭದಿಂದಲು ಪತ್ನಿ ಮಂಜುಳಾ ನಡತೆ ಸರಿಯಾಗಿರಲಿಲ್ಲ. ಪ್ರತಿದಿನ ಆಕೆ ಬೇರೆ ವ್ಯಕ್ತಿಗಳೊಂದಿಗೆ ಸಂಬಂಧ ಹೊಂದಿದ್ದಾಳೆ ಎನ್ನುವ ಸುದ್ದಿಗಳು ನನಗೆ ಕೇಳಿಬರುತ್ತಿದ್ದವು. ಆದ್ದರಿಂದ ಬೇಸತ್ತ ನಾನು ಕಳೆದ 2009ರಲ್ಲಿ ವಾಸದ ಮನೆಯನ್ನು ಬದಲಾಯಿಸಿದೆ. ನಗರಕ್ಕೆ ಬಂದ ನಂತರವು ಆಕೆ ಇತರ ಪುರುಷರೊಂದಿಗೆ ಸಂಬಂಧ ಮುಂದುವರಿಸಿದ್ದಳು. ಆದ್ದರಿಂದ ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂದು ಆರೋಪಿ  ಪೊಲೀಸರಿಗೆ ತಿಳಿಸಿದ್ದಾನೆ. 
 
ಆರೋಪಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಹತ್ಯಾ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments