Webdunia - Bharat's app for daily news and videos

Install App

ಹೆಂಡತಿ ಕೊಲ್ಲಲು ಗಂಡನ ಖತರ್ನಾಕ್ ಪ್ಲಾನ್!

Webdunia
ಸೋಮವಾರ, 8 ಆಗಸ್ಟ್ 2022 (07:14 IST)
ಜೈಪುರ : ಮಧ್ಯಪ್ರದೇಶದ ರಾಜ್ಗಢದಲ್ಲಿ ಪೊಲೀಸರು ಆಘಾತಕಾರಿ ಪ್ರಕರಣವೊಂದನ್ನು ಬಯಲಿಗೆಳೆದಿದ್ದಾರೆ.
 
ಇಲ್ಲಿ ಪತಿಯೊಬ್ಬ ಹೆಂಡತಿಯ ವಿಮಾ ಪಾಲಿಸಿಯ ಮೊತ್ತದಿಂದ ಸಾಲವನ್ನು ತೀರಿಸಲು ಆಕೆಯನ್ನು ಕೊಂದಿದ್ದಾನೆ. ಅಚ್ಚರಿ ಎಂದರೆ ಪತ್ನಿಯ ಹತ್ಯೆಗೂ ಮುನ್ನ ಪತಿಯೇ ಪತ್ನಿಗೆ 35 ಲಕ್ಷ ರೂ.ಗೆ ವಿಮೆ ಮಾಡಿಸಿದ್ದ.

ರಾಜ್ಗಢ್ ಜಿಲ್ಲೆಯ ಹೆಚ್ಚುವರಿ ಎಸ್ಪಿ ಮಂಕಮ್ನಾ ಪ್ರಸಾದ್ ಪ್ರಕಾರ, ಜುಲೈ 26 ರ ರಾತ್ರಿ 9 ಗಂಟೆಯ ಸುಮಾರಿಗೆ ಈ ಪ್ರಕರಣ ನಡೆದಿದೆ. ಜಿಲ್ಲೆಯ ಭೋಪಾಲ್ ರಸ್ತೆಯ ಮನಾ ಜೋಡ್ ಗ್ರಾಮದ ಬಳಿ ಪೂಜಾ ಮೀನಾ (27) ಎಂಬ ಮಹಿಳೆ ತನ್ನ ಪತಿ ಬದ್ರಿಪ್ರಸಾದ್ ಮೀನಾ (31) ಅವರೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ವಿಚಾರಣೆ ವೇಳೆ ತಾನು ನಾಲ್ವರಿಂದ ಸಾಲ ಪಡೆದಿದ್ದು, ಹಣ ವಾಪಸ್ ನೀಡುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದರು ಎಂದು ಪತಿ ಪೊಲೀಸರಿಗೆ ತಿಳಿಸಿದ್ದಾರೆ.

ಪತ್ನಿಯೊಂದಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಆ ನಾಲ್ವರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪತಿ ಪೊಲೀಸರಿಗೆ ತನ್ನ ಕಥೆಯಲ್ಲಿ ತಿಳಿಸಿದ್ದಾರೆ. ಈ ವೇಳೆ ಪತ್ನಿ ಮಧ್ಯಪ್ರವೇಶಿಸಿದಾಗ ಆರೋಪಿ ಗುಂಡು ಹಾರಿಸಿ ಪರಾರಿಯಾಗಿದ್ದಾನೆ ಎಂದೂ ತನಿಖೆ ವೇಳೆ ಹೇಳಿದ್ದಾನೆ. ಮಹಿಳೆಯ ಪತಿ ಹೇಳಿಕೆಯ ಆಧಾರದ ಮೇಲೆ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ವೇಳೆ ಮಹಿಳೆಗೆ ಕೆಲ ದಿನಗಳ ಹಿಂದೆ ವಿಮೆ ಮಾಡಿಸಿರುವುದು ತಿಳಿದು ಬಂದಿದೆ. ಇದಾದ ಬಳಿಕ ತನಿಖೆಯ ದಿಕ್ಕನ್ನು ಬದಲಾಯಿಸಲಾಯಿತು. ಇದಾಧ ಬಳಿಕ ಬಯಲಾದ ವಿ ಆರಗಳಿಂದ ಪೊಲೀಸರು ಕೊಲೆಗಾರನನ್ನು ಪತ್ತೆ ಹಚ್ಚಿದ್ದಾರೆ.

ಕೊಲೆಗಾರ ಬೇರಾರೂ ಅಲ್ಲ ಮೃತಳ ಪತಿ ಎಂದು ತಿಳಿದುಬಂದಿದೆ. ಆರೋಪಿಯು ಮೊದಲು ಪತ್ನಿಗೆ ವಿಮೆ ಮಾಡಿಸಿ ನಂತರ ವಿಮಾ ಮೊತ್ತದಿಂದ ಸಾಲವನ್ನು ಮರುಪಾವತಿಸಲು ಆಕೆಯನ್ನು ಕೊಂದು ಹಾಕಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments