Webdunia - Bharat's app for daily news and videos

Install App

ಪತಿಯ ಎದುರಲ್ಲೇ ಪತ್ನಿಯ ಮೇಲೆ ಎಂಟು ಕಾಮುಕರಿಂದ ಗ್ಯಾಂಗ್‌ರೇಪ್

Webdunia
ಭಾನುವಾರ, 7 ಮೇ 2017 (14:40 IST)
ಎಂಟು ಮಂದಿ ಕಾಮುಕರು ಪತಿಯ ಮುಂದೆಯೇ ಪತ್ನಿಯ ಮೇಲೆ ಅತ್ಯಾಚಾರೆವಸಗಿದ ಹೇಯ ಘಟನೆ ಜಲೌನ್ ಜಿಲ್ಲೆಯಲ್ಲಿ ವರದಿಯಾಗಿದೆ. 
 
ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ನಂತರ ಅವರಲ್ಲಿದ್ದ ಹಣ, ಚಿನ್ನವನ್ನು ದೋಚಿ ಔರಿಯಾ-ಜಲೌನ್ ಹೆದ್ದಾರಿಯ ಬಳಿ ಬಿಟ್ಟು ಪರಾರಿಯಾಗಿದ್ದಾರೆ.
 
 ಜೈಲಾನ್ ಮೂಲದ ದಂಪತಿಗಳು ಕುಶಲಕರ್ಮಿಗಳಾಗಿದ್ದು ಜೈಪುರದಿಂದ ಗುರುವಾರ ಮಧ್ಯರಾತ್ರಿಯ ವೇಳೆಗೆ ರೈಲಿನ ಮೂಲಕ ಅವರು ಅರುರಿಯಾವನ್ನು ತಲುಪಿದರು. ಅಲ್ಲಿಂದ ಲಾರಿ ಚಾಲಕನಿಗೆ ಮನವಿ ಮಾಡುವ ಮೂಲಕ ತಮ್ಮ ಗ್ರಾಮಕ್ಕೆ ತೆರಳಲು ನಿರ್ಧರಿಸಿದ್ದಾರೆ. 
 
ದಂಪತಿಗಳು ಲಾರಿ ಹತ್ತಿದ ಸ್ವಲ್ಪ ಸಮಯದ ನಂತರ, ವಾಹನವನ್ನು ಮದ್ಯದ ಅಂಗಡಿಯ ಮುಂದೆ ನಿಲ್ಲಿಸಲಾಗಿದೆ. ಅಲ್ಲಿದ್ದ ಕೆಲವರು ಲಾರಿಯನ್ನು ಹತ್ತಿದ್ದಾರೆ. ನಂತರ ವಾಹನವನ್ನು ಚಾಲಕ ಏಕಾಂತ ಸ್ಥಳಕ್ಕೆ ತೆಗೆದುಕೊಂಡು ಹೋಗಿದ್ದಾನೆ. ಅಲ್ಲಿ ಎಂಟು ಮಂದಿ ಪುರುಷರು ಆಕೆಯ ಪತಿಯನ್ನು ಮರಕ್ಕೆ ಕಟ್ಟಿ ಹಾಕಿ ನಂತರ ಪತ್ನಿಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದಾರೆ.
 
ಬೆಳಗಿನ ಜಾವ ಸುಮಾರು ಮೂರು ಗಂಟೆಗೆ ದಂಪತಿಗಳು ಪೊಲೀಸ್ ಠಾಣೆಗೆ ತೆರಳಿ ಘಟನೆಯ ಬಗ್ಗೆ ದೂರು ನೀಡಿದ್ದಾರೆ. ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಅಪರಿಚಿತ ಆರೋಪಿಗಳ ವಿರುದ್ಧ ಗ್ಯಾಂಗ್‌ರೇಪ್, ದರೋಡೆ, ಅಪಹರಣ ಕೇಸ್ ದಾಖಲಿಸಲಾಗಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಹೆಚ್ಚುವರಿ ಪೊಲೀಸ್ ಅಧಿಕಾರಿ ಎಸ್.ಸಿ.ಶಕ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ಮುಂದಿನ ಸುದ್ದಿ
Show comments