Webdunia - Bharat's app for daily news and videos

Install App

ಒಡವೆ ಖರೀದಿಸಿದ ಪತ್ನಿಯನ್ನು ಹೊಡೆದು ಕೊಂದ ಪತಿ!

Webdunia
ಮಂಗಳವಾರ, 9 ನವೆಂಬರ್ 2021 (09:24 IST)
ಬೆಂಗಳೂರು : ಮನೆ ಬಾಡಿಗೆ ಕೊಡಲು ಇಟ್ಟಿದ್ದ ಹಣದಲ್ಲಿ ಆಭರಣ ಖರೀದಿಸಿದ ವಿಚಾರಕ್ಕೆ ದಂಪತಿ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಯಾನಂದ ನಗರದ ಕೆ.ಎಂ. ಕಾಲೊನಿಯಲ್ಲಿ ವಾಸವಿದ್ದ ನಾಜಿಯಾ ಕೊಲೆಯಾದ ಮಹಿಳೆ. ಪತಿ ಆಟೋ ಚಾಲಕ ಫಾರೂಕ್ ಬಂಧಿತ. ಈ ಸಂಬಂಧ ಮೃತ ಮಹಿಳೆಯ ತಾಯಿ ನೀಡಿದ ದೂರಿನ ಮೇರೆಗೆ ಫಾರೂಕ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫಾರೂಕ್ ಮತ್ತು ನಾಜಿಯಾ 18 ವರ್ಷಗಳ ಹಿಂದೆ ಮದುವೆಯಾಗಿದ್ದರು. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ. ಎರಡು ವರ್ಷಗಳಿಂದ ದಂಪತಿ ಸಿದ್ಧಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಎಂ. ಕಾಲೊನಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಜೀವನ ನಿರ್ವಹಣೆಗಾಗಿ ಫಾರೂಕ್ ಆಟೋ ಓಡಿಸುತ್ತಿದ್ದ. ಹಣದ ವಿಚಾರಕ್ಕೆ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಜಗಳ ನಡೆದಾಗ ಒಮ್ಮೊಮ್ಮೆ ನಾಜಿಯಾ ತನ್ನ ಮಕ್ಕಳ ಜತೆ ತವರು ಮನೆಗೆ ಹೋಗುತ್ತಿದ್ದುದನ್ನು ಮಕ್ಕಳಿಂದ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದು ಡಿಸಿಪಿ ಹರೀಶ್ ಪಾಂಡೆ ತಿಳಿಸಿದರು.
ಮನೆ ಬಾಡಿಗೆ ಕಟ್ಟಲೆಂದು ಫಾರೂಕ್ ಕಳೆದ ವಾರ 6500 ರೂ.ಗಳನ್ನು ಪತ್ನಿ ನಾಜಿಯಾಗೆ ನೀಡಿದ್ದ. ಈ ಹಣದಲ್ಲಿ ನಾಜಿಯಾ ತನ್ನ ಮಕ್ಕಳಿಗೆ ಕೃತಕ ಆಭರಣಗಳನ್ನು ಖರೀದಿಸಿದ್ದರು. ಬಳಿಕ ಹಣ ಕೊಡುವಂತೆ ಪತ್ನಿಯನ್ನು ಫಾರೂಕ್ ಕೇಳಿದ್ದಾನೆ. ಆದರೆ, ಹಣವಿಲ್ಲದಿದ್ದಾಗ ಇಬ್ಬರ ನಡುವೆ ಜಗಳವಾಗಿದೆ. ಕೋಪದಲ್ಲಿದ್ದ ಫಾರೂಕ್ ಪತ್ನಿಯ ಮುಖಕ್ಕೆ ಗುದ್ದಿ, ತಲೆಯನ್ನು ಗೊಡೆಗೆ ಗುದ್ದಿಸಿದ್ದಾನೆ. ತಲೆಗೆ ತೀವ್ರ ಪೆಟ್ಟು ಬಿದ್ದ ನಾಜಿಯಾ ಕುಸಿದು ಬಿದ್ದಾಗ ಪಕ್ಕದ ಬೀದಿಯಲ್ಲಿ ವಾಸವಿದ್ದ ನಾಜಿಯಾ ಪೋಷಕರಿಗೆ ಫಾರೂಕ್ ವಿಷಯ ತಿಳಿಸಿದ್ದಾನೆ. ಮನೆಗೆ ದೌಡಾಯಿಸಿದ ಆಕೆಯ ತಾಯಿ ಮತ್ತು ಸಹೋದರ ಹಾಗೂ ಫಾರೂಕ್ ಆಟೋದಲ್ಲಿ ನಾಜಿಯಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಎರಡು ಆಸ್ಪತ್ರೆಯಲ್ಲಿ ಆಕೆಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಮೂರನೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ .
ನಾಜಿಯಾ ಶವ ಸಂಸ್ಕಾರದ ಬಳಿಕ ಆಕೆಯ ತಾಯಿಯನ್ನು ವಿಚಾರಿಸಿದಾಗ ದಂಪತಿ ಜಗಳ ಮಾಡುತ್ತಿರುವ ವಿಷಯ ತಿಳಿಯಿತು. ಆಕೆಯ ತಾಯಿ ನೀಡಿದ ದೂರಿನ ಮೇರೆಗೆ ಫಾರೂಕ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೋಪದಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಿದಾಗ ಮೃತಪಟ್ಟಿದ್ದಾಳೆ ಎಂಬುದನ್ನು ಒಪ್ಪಿಕೊಂಡಿದ್ದಾನೆ. ಆತನನ್ನು ಬಂಧಿಸಲಾಗಿದೆ. ಹಾಗೆಯೇ ನಾಜಿಯಾಳನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ ಎರಡು ಆಸ್ಪತ್ರೆಗಳಿಗೂ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಡಿಸಿಪಿ ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments