Webdunia - Bharat's app for daily news and videos

Install App

ಮದುವೆ ಮನೆಯಾಯ್ತು ಮಸಣ: ವಧುವಿನ ಮುಂದೆ ವರನ ಬರ್ಬರ ಹತ್ಯೆ

Webdunia
ಸೋಮವಾರ, 24 ಅಕ್ಟೋಬರ್ 2016 (11:00 IST)
ವಾರಂಗಲ್‌ನಲ್ಲಿ ಮತ್ತೊಂದು ವರ್ಯಾದಾ ಹತ್ಯೆ ನಡೆದಿದೆ.ತಮ್ಮ ಮಗಳನ್ನು ಪ್ರೀತಿಸಿ ಮದುವೆಯಾಗುತ್ತಿದ್ದ ಯುವಕನ ಮೇಲೆ ವಧುವಿನ ಮನೆಯವರು ದಾಳಿ ನಡೆಸಿ ಮದುವೆ ಮನೆಯಲ್ಲೇ ಹತ್ಯೆಗೈಯ್ಯಲಾಗಿದೆ. 

ಬರ್ಬರವಾಗಿ ಹತ್ಯೆಯಾದ ಯುವಕನನ್ನು 22 ವರ್ಷದ ಮಹಾಂಕಾಳಿ ಅನಿಲ್ ಎಂದು ಗುರುತಿಸಲಾಗಿದೆ. ಆತ ಪ್ರೀತಿಸಿ ಮದುವೆಯಾಗ ಹೊರಟಿದ್ದ ಯುವತಿ ಮೌನಿಕಾ (18)ಳ ಪೋಷಕರಿಂದ ಆತ ಹತ್ಯೆಯಾಗಿದ್ದಾನೆ. 
 
ವರದಿಗಳ ಪ್ರಕಾರ ಕಳೆದೊಂದು ವರ್ಷದಿಂದ ಪರಷ್ಪರ ಪ್ರೀತಿಸುತ್ತಿದ್ದ ಜೋಡಿಯನ್ನು ಬೇರ್ಪಡಿಸಲು ಯುವತಿಯ ಪೋಷಕರು ಪ್ರಯತ್ನಿಸುತ್ತಿದ್ದರು. ಹೀಗಾಗಿ ಈ ಹಿಂದೆ ಕೂಡ ಜೋಡಿ ಓಡಿ ಹೋಗಿ ಮದುವೆಯಾಗಲು ಪ್ರಯತ್ನಿಸಿತ್ತು. ಆಗೆಲ್ಲ ಮೌನಿಕಾ ಪೋಷಕರು ಆಕೆ ಅಪ್ರಾಪ್ತಳೆಂಬ ಕಾರಣವನ್ನು ಮುಂದಿಟ್ಟುಕೊಂಡು ಪೊಲೀಸರ ಸಹಾಯವನ್ನು ಪಡೆದಿದ್ದರು.
 
ಆದರೆ ಯುವತಿಗೆ 18 ವರ್ಷವಾಗುತ್ತಿದ್ದಂತೆ ಇಬ್ಬರು ಓಡಿ ಹೋಗಿ ದೇವಸ್ಥಾನದಲ್ಲಿ ಮದುವೆಯಾಗಲು ಪ್ರಯತ್ನಿಸಿದ್ದಾರೆ. ಈ ಸುದ್ದಿ ತಿಳಿದ ಯುವತಿಯ ಮನೆಯವರು ಅಲ್ಲಿಗೆ ಬಂದು ಯುವಕನನ್ನು ಭೀಕರವಾಗಿ ಕೊಂದು ಹಾಕಿದ್ದಾರೆ. 
 
ಆರೋಪಿಗಳಲ್ಲಿ ಕೆಲವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಕಳೆದ ಕೆಲ ದಿನಗಳ ಹಿಂದೆ ಮದುವೆಗೆ ಮುನ್ನ ಗರ್ಭಿಣಿಯಾಗಿದ್ದಾಳೆಂದು 19 ವರ್ಷದ ಯುವತಿಯನ್ನು ಆಕೆಯ ತಾಯಿ, ಅಣ್ಣಂದಿರೇ ಹತ್ಯೆಗೈದ ಘಟನೆ ತೆಲಂಗಾಣದ ರಂಗಾರೆಡ್ಡಿಯಲ್ಲಿ ನಡೆದಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

ಮುಂದಿನ ಸುದ್ದಿ
Show comments