Select Your Language

Notifications

webdunia
webdunia
webdunia
webdunia

ನನ್ನ ಮಗಳ ಆತ್ಮಕ್ಕೆ ಈಗ ಶಾಂತಿ ಸಿಕ್ಕಿತು: ಪಶುವೈದ್ಯೆಯ ಪೋಷಕರ ಮಾತು

ನನ್ನ ಮಗಳ ಆತ್ಮಕ್ಕೆ ಈಗ ಶಾಂತಿ ಸಿಕ್ಕಿತು: ಪಶುವೈದ್ಯೆಯ ಪೋಷಕರ ಮಾತು
ಹೈದರಾಬಾದ್ , ಶುಕ್ರವಾರ, 6 ಡಿಸೆಂಬರ್ 2019 (09:04 IST)
ಹೈದರಾಬಾದ್: ಪಶುವೈದ್ಯೆಯ ಮೇಲೆ ಅಮಾನುಷವಾಗಿ ಅತ್ಯಾಚಾರ ಮಾಡಿ ಕೊಲೆಗೈದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ಮಾಡಿ ಹತ್ಯೆ ಮಾಡಿದ ಬಗ್ಗೆ ಸಂತ್ರಸ್ತೆಯ ಪೋಷಕರು ಪ್ರತಿಕ್ರಿಯಿಸಿದ್ದಾರೆ.


ಈ ಬಗ್ಗೆ ಮಾತನಾಡಿರುವ ಸಂತ್ರಸ್ತೆಯ ತಂದೆ ತೆಲಂಗಾಣ ಪೊಲೀಸ್, ಮಾಧ್ಯಮಗಳು ಮತ್ತು ತಮಗೆ ಬೆಂಬಲವಾಗಿ ನಿಂತ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ. ಈಗ ನಮ್ಮ ಮಗಳ ಆತ್ಮಕ್ಕೆ ಶಾಂತಿ ಸಿಕ್ಕಿತು ಎಂದು ಪೋಷಕರು ಹೇಳಿದ್ದಾರೆ.

ಇನ್ನೊಂದೆಡೆ, 2012 ರಲ್ಲಿ ದೆಹಲಿಯಲ್ಲಿ ಇದೇ ರೀತಿ ಅಮಾನುಷವಾಗಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ನಿರ್ಭಯಾ ಪೋಷಕರೂ ಇದೇ ರೀತಿ ಪ್ರತಿಕ್ರಿಯಿಸಿದ್ದಾರೆ. ನಮ್ಮ ಗಾಯಕ್ಕೆ ಮುಲಾಮು ಸಿಕ್ಕಿದಂತಾಗಿದೆ ಎಂದಿದ್ದಾರೆ. ಇಂತಹ ದುರುಳರಿಗೆ ಇದೇ ರೀತಿ ಪಾಠ ಕಲಿಸಬೇಕು ಎಂದು ನಿರ್ಭಯಾ ತಾಯಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಶುವೈದ್ಯೆಯ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳು ಎನ್ ಕೌಂಟರ್ ನಲ್ಲಿ ಫಿನಿಶ್