Webdunia - Bharat's app for daily news and videos

Install App

ನನ್ನ ಮೇಲೆ ಹಲ್ಲೆ ನಡೆದ್ರೆ ಸುಮ್ಮನಿರಲ್ಲ ನಾಲ್ಕು ಬಾರಿಸುತ್ತೇನೆ: ಬಿಜೆಪಿ ಶಾಸಕ

Webdunia
ಮಂಗಳವಾರ, 16 ಫೆಬ್ರವರಿ 2016 (15:22 IST)
ಕೋರ್ಟ್ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವುದನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ, ನಾನು ಬಾಲ್ಯದಿಂದಲೂ ಹಾಗೆಯೇ ಇದ್ದೇನೆ ಎಂದು ಹೇಳಿದ್ದಾರೆ. 
 
ನಾನು ಬಾಲ್ಯದಿಂದಲೂ ಹಾಗೆಯೇ ಇದ್ದೇನೆ. ನನ್ನ ಮೇಲೆ ಹಲ್ಲೆ ನಡೆದಾಗ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಸ್ವಯಂ ರಕ್ಷಣೆಗಾಗಿ ನಾನು ನಾಲ್ಕೈದು ಹೊಡೆತಗಳನ್ನು ನೀಡಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.
 
ನಿನ್ನೆ ಸಂಜೆ ಕೋರ್ಟ್ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಿಪಿಐ ಕಾರ್ಯಕರ್ತ ಅಮೀಕ್ ಜಮೈ ಮತ್ತು ಇತರರನ್ನು ಶರ್ಮಾ ಮತ್ತು ಅವರ ಬೆಂಬಲಿಗರು ಥಳಿಸುತ್ತಿರುವ ದೃಶ್ಯಗಳು ಟಿವಿ ಚಾನೆಲ್‌ಗಳಲ್ಲಿ ಪ್ರಸಾರವಾದ ನಂತರ ಶರ್ಮಾ ಪ್ರತಿಕ್ರಿಯೆ ನೀಡುತ್ತಿದ್ದರು.
 
ದೆಹಲಿ ವಿಧಾನಸಭೆಯಲ್ಲಿ ಕೇವಲ ಬಿಜೆಪಿಯ ಮೂವರು ಶಾಸಕರಿದ್ದು, ಅದರಲ್ಲಿ ಓಂ ಪ್ರಕಾಶ್ ಕೂಡಾ ಒಬ್ಬರಾಗಿದ್ದಾರೆ. ಆಪ್ ಶಾಸಕಿ ಅಲ್ಕಾ ಲಾಂಬಾ ಅವರನ್ನು ವೇಶ್ಯೆ ಎಂದು ಜರಿದಿದ್ದರಿಂದ ಅವರನ್ನು ದೆಹಲಿ ವಿಧಾನಸಭೆಯಿಂದ ಅಮಾನತ್ತುಗೊಳಿಸಲಾಗಿದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments