Webdunia - Bharat's app for daily news and videos

Install App

ನಾನು ಅಹಂಕಾರಿಯಲ್ಲ, ಆದ್ರೆ ಸ್ವಾಭಿಮಾನಿ: ಮೋದಿಗೆ ನಿತೀಶ್ ಕುಮಾರ್ ತಿರುಗೇಟು

Webdunia
ಮಂಗಳವಾರ, 6 ಅಕ್ಟೋಬರ್ 2015 (16:32 IST)
ನಾನು ಅಹಂಕಾರಿಯಲ್ಲ, ಆದರೆ ಸ್ವಾಭಿಮಾನಿ ಎಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
 
ಜನತಾ ಪರಿವಾರ ಒಂದು ವೇಳೆ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಲ್ಲಿ ಕೇಂದ್ರ ಸರಕಾರದ ಪ್ಯಾಕೇಜ್‌ಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನೀಡಿದ ಹೇಳಿಕೆಗೆ ಕಿಡಿಕಾರಿದ ನಿತೀಶ್, ರಾಜ್ಯದ ಅಭಿವೃದ್ಧಿಗಾಗಿ ಸಂಪನ್ಮೂಲ ಹೆಚ್ಚಿಸುವ ಸಾಮರ್ಥ್ಯ ನನಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಕೇಂದ್ರ ಸರಕಾರದ ಸಚಿವರು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯದ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಾರೆ. ಆದರೆ, ಬರಗಾಲದಿಂದ ಕಂಗಾಲಾಗಿರುವ ರೈತರ ಬಗ್ಗೆ ಕಾಳಜಿ ತೋರಿಸುತ್ತಿಲ್ಲ ಎಂದು ವ್ಯಂಗ್ಯವಾಡಿದರು. 
 
ಜೆಡಿಯು ಪಕ್ಷದ ಅಭ್ಯರ್ಥಿಗಳಾದ ದಾಮೋದರ್ ರೌವತ್, ಡಾ.ರವೀಂದ್ರ ಯಾದವ್ ಪರ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ನಿತೀಶ್, ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು ಸಮಾಜವನ್ನು ಇಬ್ಬಾಗಿಸುವ ಕೃತ್ಯದಲ್ಲಿ ತೊಡಗಿದೆ. ಇಂತಹ ಪಕ್ಷವನ್ನು ತಿರಸ್ಕರಿಸಿ ಎಂದು ಕರೆ ನೀಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments