ಜನರಿಗೆ ನಾನು ಸೇವಕನಷ್ಟೇ : ನರೇಂದ್ರ ಮೋದಿ

Webdunia
ಮಂಗಳವಾರ, 31 ಮೇ 2022 (13:04 IST)
ನವದೆಹಲಿ : ನಾನು ನನ್ನನ್ನೂ ಒಮ್ಮೆಯೂ ಪ್ರಧಾನಿಯಾಗಿ ನೋಡಲಿಲ್ಲ, ದಾಖಲೆಗಳಿಗೆ ಸಹಿ ಹಾಕುವಾಗ ಮಾತ್ರ ಪ್ರಧಾನಮಂತ್ರಿಯ ಜವಾಬ್ದಾರಿ ನಿಭಾಯಿಸುತ್ತೇನೆ.

ಬಾಕಿ ಎಲ್ಲ ಸಮಯದಲ್ಲೂ ನನ್ನ ಜೀವನದಲ್ಲಿ ಎಲ್ಲವೂ ಆಗಿರುವ 130 ಕೋಟಿ ಜನರ ಪ್ರಧಾನ ಸೇವಕನಾಗಿರುತ್ತೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಎನ್ಡಿಎ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಎಂಟು ವರ್ಷ ಪೂರ್ಣವಾಗಿರುವ ಹಿನ್ನಲೆ ಇಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಗರೀಬ್ ಕಲ್ಯಾಣ ಹೆಸರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ 9 ಇಲಾಖೆಗಳ ಯೋಜನೆಗಳ ಬಗ್ಗೆ ವಿವಿಧ ರಾಜ್ಯಗಳ ಜನರ ಜೊತೆಗೆ ಮೋದಿ ಸಂವಾದ ನಡೆಸಿ, ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
2014ರ ಮೊದಲು ಸರ್ಕಾರವು ಭ್ರಷ್ಟಾಚಾರವನ್ನು ವ್ಯವಸ್ಥೆಯ ಅವಿಭಾಜ್ಯ ಅಂಗವೆಂದು ಪರಿಗಣಿಸಿತ್ತು. ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಬದಲು ಅದಕ್ಕೆ ಶರಣಾಗಿತು.

ಯೋಜನೆಗಳ ಹಣ ನಿಗದಿತ ಸ್ಥಳಕ್ಕೆ ತಲುಪುವ ಮೊದಲು ಲೂಟಿ ಮಾಡಲಾಗುತ್ತಿತ್ತು. ಆದರೆ ನಮ್ಮ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಟ ಆರಂಭಿಸಿದೆ. ಆನ್ಲೈನ್ ವಹಿವಾಟು ಮೂಲಕ ಫಲಾನುಭವಿಗಳ ಖಾತೆಗೆ ಹಣ ಸೇರುತ್ತಿದೆ ಎಂದರು. 

ನಮ್ಮ ಸರ್ಕಾರ ಬಡವರಿಗೆ ಬ್ಯಾಂಕ್ ಖಾತೆ ಮಾಡಿಸಿಕೊಟ್ಟಿತ್ತು. ಆಧಾರ್ ಮತ್ತು ಮೊಬೈಲ್ ನಂಬರ್ ಜೋಡಿಸುವ ಮೂಲಕ ತ್ರಿಶಕ್ತಿ ರೂಪಿಸಿ ಭದ್ರತೆ ಹೆಚ್ಚಿಸಿತು. ಈಗ ಈ ಬಗ್ಗೆ ಎಲ್ಲ ಕಡೆ ಚರ್ಚೆಯಾಗುತ್ತಿದೆ. ಮೊದಲು ಅಡುಗೆ ಮನೆಯಲ್ಲಿ ಒಲೆ ಊದುವುದು ಅನಿವಾರ್ಯವಾಗಿತ್ತು. ಆದರೆ ನಾವು ಉಜ್ವಲ ಯೋಜನೆ ಮೂಲಕ ಸಿಲಿಂಡರ್ ನೀಡುತ್ತಿದ್ದೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments