Select Your Language

Notifications

webdunia
webdunia
webdunia
webdunia

ಉತ್ತರಪ್ರದೇಶ ರೈತರ ಸಾಲ ಮನ್ನಾಗೆ ನಾನೇ ಕಾರಣ: ರಾಹುಲ್ ಗಾಂಧಿ

ಉತ್ತರಪ್ರದೇಶ ರೈತರ ಸಾಲ ಮನ್ನಾಗೆ ನಾನೇ ಕಾರಣ: ರಾಹುಲ್ ಗಾಂಧಿ
ವಡೋದರಾ , ಬುಧವಾರ, 27 ಸೆಪ್ಟಂಬರ್ 2017 (13:03 IST)
ಉತ್ತರಪ್ರದೇಶ ರೈತರ ಸಾಲ ಮನ್ನಾಗೆ ನಾನೇ ಕಾರಣ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಗುಜರಾತ್‌ನಲ್ಲಿ ಎರಡು ದಿನಗಳ ಪ್ರವಾಸಕ್ಕಾಗಿ ಆಗಮಿಸಿರುವ ರಾಹುಲ್, ಪ್ರಧಾನಿ ಮೋದಿ ರೈತರ ಸಾಲ ಮನ್ನಾ ಮಾಡಲು ಸಿದ್ದವಿಲ್ಲ. ಆದರೆ ಐವರು ಉದ್ಯಮಿಗಳ ಸಾವಿರಾರು ಕೋಟಿ ರೂಪಾಯಿಗಳ ಸಾಲ ಮನ್ನಾ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
 
ದೇಶದಾದ್ಯಂತ ರೈತರು, ಸಣ್ಣ ವ್ಯಾಪಾರಿಗಳು, ಸಾಮಾನ್ಯ ಜನತೆ ಕಂಗಾಲಾಗಿದ್ದಾರೆ. ಆದರೆ, ಮೋದಿ ಸರಕಾರ ಕೇವಲ ಬೃಹತ್ ಉದ್ಯಮಿಗಳಿಗೆ ಅಚ್ಚೇ ದಿನ್ ತಂದಿದೆ ಎಂದು ಕಿಡಿಕಾರಿದರು.
 
ಸಾಮಾನ್ಯ ಜನತೆಗೆ ಗುಜರಾತ್ ಮಾಡೆಲ್ ಸಂಪೂರ್ಣ ವಿಫಲವಾಗಿದ್ದು, ಕೈಗಾರಿಕೋದ್ಯಮಿಗಳ ಪಾಲಿಗೆ ಸ್ವರ್ಗವಾಗಿದೆ. ಬಡವರು, ರೈತರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಡುಗಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ದೇವಮಾನವನ ಬಂಧನ