Webdunia - Bharat's app for daily news and videos

Install App

ಚುನಾವಣೆ ಬಗ್ಗೆ ನಡ್ಡಾ ಜೊತೆ ಚರ್ಚಿಸಿದ್ದೇನೆ : ಬಿಎಸ್‌ವೈ

Webdunia
ಶನಿವಾರ, 27 ಆಗಸ್ಟ್ 2022 (10:35 IST)
ನವದೆಹಲಿ : ಮುಂದಿನ 8 ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇದೆ. ಈ ಹಿನ್ನೆಲೆ ಪಕ್ಷದ ಸಂಘಟನೆ ಹಾಗೂ ಮುಂದಿನ ಚುನಾವಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
 
ಶುಕ್ರವಾರ ದೆಹಲಿಯಲ್ಲಿ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಬಿಎಸ್ವೈ, ವಿಧಾನಸಭಾ ಚುನಾವಣೆಗೆ ಇನ್ನು 8 ತಿಂಗಳು ಇದೆ. ಹೀಗಾಗಿ ನಡ್ಡಾ ಅವರನ್ನು ನಮ್ಮ ರಾಜ್ಯದಲ್ಲಿ ಹೆಚ್ಚು ಪ್ರವಾಸ ಮಾಡುವಂತೆ ಮನವಿ ಮಾಡಿದ್ದೇನೆ. ಆದರೆ ರಾಜ್ಯಾಧ್ಯಕ್ಷರ ಬಗ್ಗೆ ಚರ್ಚೆ ಮಾಡಿಲ್ಲ. ಆ ತಿರ್ಮಾನವನ್ನು ಪಕ್ಷವೇ ಮಾಡಲಿದೆ ಎಂದು ಹೇಳಿದರು.

ನಡ್ಡಾ ಅವರು ರಾಜ್ಯಕ್ಕೆ ಹೆಚ್ಚು ಸಮಯ ನೀಡುವ ಭರವಸೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ನಡ್ಡಾ ಇಬ್ಬರೂ ರಾಜ್ಯಕ್ಕೆ ಬರಲಿದ್ದಾರೆ. ಇದೀಗ ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ. ಇದಕ್ಕಾಗಿ ಮಾಡಿಕೊಂಡಿರುವ ತಯಾರಿ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments