Webdunia - Bharat's app for daily news and videos

Install App

ಕಾವೇರಿ ವಿಚಾರ: ಪ್ರಧಾನಿ ಮೋದಿ ಮೇಲೆ ವಿಶ್ವಾಸವಿದೆ ಎಂದ ದೇವೇಗೌಡ

Webdunia
ಭಾನುವಾರ, 2 ಅಕ್ಟೋಬರ್ 2016 (14:22 IST)
ಕಾವೇರಿ ವಿವಾದಕ್ಕೆ ಸಂಬಧಿಸಿದಂತೆ ಪ್ರಧಾನಿ ಮೋದಿ ಜತೆ ಮಾತನಾಡಿದ್ದೇನೆ, ಅವರು ನಮ್ಮ ಸಮಸ್ಯೆಗೆ ಸ್ಪಂದಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಮಾಜಿ ಪ್ರಧಾನಿ , ಜೆಡಿಎಸ್ ವರಿಷ್ಠ ಹೆಚ್. ಡಿ ದೇವೇಗೌಡ ಅವರು ಹೇಳಿದ್ದಾರೆ.


 
ಪ್ರಧಾನಿ ಇಂದು ಮುಂಜಾನೆ ದೂರವಾಣಿ ಕರೆ ಮಾಡಿದ್ದರು. ಈ ಸಂದರ್ಭದಲ್ಲಿ ನಾನು ಕಾವೇರಿ ನದಿ ನೀರು ಬಿಕ್ಕಟ್ಟಿನ ಬಗ್ಗೆ ಮಾತನಾಡಿದ್ದೇನೆ. ಸಿಎಂ ಸಿದ್ದರಾಮಯ್ಯ ಮತ್ತು ಮೋದಿ ಮೇಲೆ ವಿಶ್ವಾಸವಿದೆ. ಯಾರ ಮೇಲೂ ನನಗೆ ಅಪನಂಬಿಕೆ ಇಲ್ಲ ಎಂದಿದ್ದಾರೆ ಗೌಡರು.
 
ನಾಳಿನ ವಿಧಾನ ಮಂಡಲ ವಿಶೇಷ ಅಧಿವೇಶನದಲ್ಲಿ 3 ಪಕ್ಷಗಳು ಏನು ನಿರ್ಧಾರ ಕೈಗೊಳ್ಳುತ್ತಾರೋ ನೋಡೋಣ. ಕೇಂದ್ರದಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರ ನಡೆಸುತ್ತದೆ. ಹೀಗಾಗಿ ಯಾವ ಪಕ್ಷವನ್ನು ಓಲೈಸುವ ಅನಿವಾರ್ಯತೆ ಅವರಿಗಿಲ್ಲ ನಮ್ಮ ಸಮಸ್ಯೆಗೆ ಕೇಂದ್ರ ಸ್ಪಂದಿಸುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಅವರು ತಿಳಿಸಿದ್ದಾರೆ.
 
ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಆಗ್ರಹಿಸಿ ನಿನ್ನೆ ಮಾಜಿ ಪ್ರಧಾನಿ ಉಪವಾಸ ಸತ್ಯಾಗ್ರಹವನ್ನು ನಡೆಸಿದ್ದರು. ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಮತ್ತು ಅನಂತ ಕುಮಾರ್ ಪ್ರಧಾನಿ ಮೋದಿ ಕಾವೇರಿ ವಿವಾದದ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ. ನಾವು ಕೂಡ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದ ಬಳಿಕ ರಾತ್ರಿ ಸತ್ಯಾಗ್ರವನ್ನು ಅಂತ್ಯಗೊಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಭಾರತ ಬಿಟ್ಟು ತೊಲಗಿ ಆದೇಶ: ಅಟ್ಟಾರಿ-ವಾಘಾ ಗಡಿಯಲ್ಲಿ 786 ಪಾಕ್‌ ಪ್ರಜೆಗಳಿಗೆ ಗೇಟ್‌ಪಾಸ್‌

Karnataka Weather: ರಾಜ್ಯದ ಈ ಪ್ರದೇಶಗಳಲ್ಲಿ ಇಂದು ಮಳೆ ಬರುವುದು ಪಕ್ಕಾ

ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದಲ್ಲಿ ಚಂದನೋತ್ಸವಂ ವೇಳೆ ಗೋಡೆ ಕುಸಿದು ಎಂಟು ಭಕ್ತರು ಸಾವು

ಮುಂದಿನ ಸುದ್ದಿ
Show comments