Webdunia - Bharat's app for daily news and videos

Install App

'ಆರ್ ಎಸ್ ಎಸ್ ಜೊತೆ ನನಗೆ ಸಂಬಂಧವಿಲ್ಲ': ಹೆಚ್ ಡಿ ದೇವೇಗೌಡ

Webdunia
ಶನಿವಾರ, 9 ಅಕ್ಟೋಬರ್ 2021 (13:33 IST)
ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿಯವರು ಪ್ರತಿಪಾದಿಸಿದಂತೆ ತಮಗೆ ಆರ್ ಎಸ್ ಎಸ್ ಜೊತೆ ಯಾವುದೇ ಸಂಬಂಧವಿಲ್ಲ. ಈ ಹಿಂದೆ ತಾವು ಆರ್ ಎಸ್ ಎಸ್ ನ್ನು ಹೊಗಳಿದ್ದು ಕೂಡ ಇಲ್ಲ ಎಂದು ಹೇಳಿದ್ದಾರೆ.

ಈ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿರುದ್ಧ ತಪ್ಪು ಮಾಹಿತಿಯನ್ನು ಹಬ್ಬಿಸುತ್ತಿರುವ ಸಿ ಟಿ ರವಿ ವಿರುದ್ಧ ಹೆಚ್ ಡಿ ದೇವೇಗೌಡ ಕಿಡಿಕಾರಿದ್ದಾರೆ. ನಿನ್ನೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಇತ್ತೀಚೆಗೆ ಟ್ವೀಟ್ ಮೂಲಕ ಸಿ ಟಿ ರವಿಯವರು ಹೆಚ್ ಡಿ ದೇವೇಗೌಡರು ಆರ್ ಎಸ್ ಎಸ್ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳಿದ್ದರು. ಆರ್ ಎಸ್ ಎಸ್ ಬಗ್ಗೆ ತುಚ್ಛವಾಗಿ ಮಾತನಾಡುವ ಬದಲು ಅವರ ಮಗ ಹೆಚ್ ಡಿ ಕುಮಾರಸ್ವಾಮಿಯವರು ತಂದೆಯಿಂದ ಕಲಿಯಬೇಕು ಎಂದಿದ್ದರು. ಆರ್ ಎಸ್ ಎಸ್ ಈ ದೇಶದಲ್ಲಿ ರಹಸ್ಯ ಅಜೆಂಡಾವನ್ನು ಇಟ್ಟುಕೊಂಡು ಅಧಿಕಾರಿಗಳ ತಂಡವನ್ನು ಕಟ್ಟಿಕೊಂಡು ಆಡಳಿತ ನಡೆಸುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು.
ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡ, ''ಸುಳ್ಳು ಹೇಳುವುದಕ್ಕೆ ಮಿತಿಯಿರಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು ಬಿಟ್ಟರೆ ನನಗೂ ಆರ್ ಎಸ್ ಎಸ್ ಗೂ ಯಾವುದೇ ಸಂಬಂಧವಿಲ್ಲ. ಬ್ಯಾಂಕ್ವೆಟ್ ಹಾಲ್ ನ್ನು ದುರುಪಯೋಗಪಡಿಸಿಕೊಂಡಿದ್ದಕ್ಕೆ ನಾನು ಆಗ ಆಕ್ಷೇಪ ವ್ಯಕ್ತಪಡಿಸಿದ್ದೆ ಎಂದು ಹೇಳಿದ್ದಾರೆ.
ಆರ್ಎಸ್ಎಸ್ ತನ್ನ ರಚನಾತ್ಮಕ ವರ್ಷಗಳಲ್ಲಿ ಮಾಡಿದ ಕೆಲಸವನ್ನು ಎಲ್ಲರೂ ಮೆಚ್ಚಿದ್ದಾರೆ, ಆದರೆ ಇಂದು ಅದರ ಕೆಲಸ-ಕಾರ್ಯಗಳು ಭಿನ್ನವಾಗಿದೆ. "ಹೆಡ್ಗೆವಾರ್ (ಆರ್ಎಸ್ಎಸ್ನ ಸರಸಂಚಾಲಕ ಸ್ಥಾಪಕ) ಸಂಘ ಅಥವಾ ಅಂದಿನ ಆರ್ಎಸ್ಎಸ್ ಮಾಡಿದ ಕೆಲಸವು ಇಂದು ಮಾಡುತ್ತಿರುವ ಕೆಲಸಕ್ಕಿಂತ ಭಿನ್ನವಾಗಿತ್ತು. ಇಂದು ಮತ್ತು ಅಂದಿನ ಆರ್ ಎಸ್ ಎಸ್ ಗೂ ಯಾವುದೇ ಸಂಬಂಧವಿಲ್ಲ" ಎಂದು ದೇವೇಗೌಡರು ಹೇಳಿದರು.
ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪಚುನಾವಣೆಗೆ ಮುಸ್ಲಿಮರನ್ನು ಕಣಕ್ಕಿಳಿಸುವ ತನ್ನ ಪಕ್ಷದ ನಿರ್ಧಾರವನ್ನು ಗೌಡರು ಸಮರ್ಥಿಸಿಕೊಂಡರು, ಕಾಂಗ್ರೆಸ್ ತನ್ನ ಸಂಭಾವ್ಯ ಅಭ್ಯರ್ಥಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನೋಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಇದು ತಮಗೆ ಅನಿವಾರ್ಯವಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments