Webdunia - Bharat's app for daily news and videos

Install App

'ಆರ್ ಎಸ್ ಎಸ್ ಜೊತೆ ನನಗೆ ಸಂಬಂಧವಿಲ್ಲ': ಹೆಚ್ ಡಿ ದೇವೇಗೌಡ

Webdunia
ಶನಿವಾರ, 9 ಅಕ್ಟೋಬರ್ 2021 (13:33 IST)
ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿಯವರು ಪ್ರತಿಪಾದಿಸಿದಂತೆ ತಮಗೆ ಆರ್ ಎಸ್ ಎಸ್ ಜೊತೆ ಯಾವುದೇ ಸಂಬಂಧವಿಲ್ಲ. ಈ ಹಿಂದೆ ತಾವು ಆರ್ ಎಸ್ ಎಸ್ ನ್ನು ಹೊಗಳಿದ್ದು ಕೂಡ ಇಲ್ಲ ಎಂದು ಹೇಳಿದ್ದಾರೆ.

ಈ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿರುದ್ಧ ತಪ್ಪು ಮಾಹಿತಿಯನ್ನು ಹಬ್ಬಿಸುತ್ತಿರುವ ಸಿ ಟಿ ರವಿ ವಿರುದ್ಧ ಹೆಚ್ ಡಿ ದೇವೇಗೌಡ ಕಿಡಿಕಾರಿದ್ದಾರೆ. ನಿನ್ನೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಇತ್ತೀಚೆಗೆ ಟ್ವೀಟ್ ಮೂಲಕ ಸಿ ಟಿ ರವಿಯವರು ಹೆಚ್ ಡಿ ದೇವೇಗೌಡರು ಆರ್ ಎಸ್ ಎಸ್ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳಿದ್ದರು. ಆರ್ ಎಸ್ ಎಸ್ ಬಗ್ಗೆ ತುಚ್ಛವಾಗಿ ಮಾತನಾಡುವ ಬದಲು ಅವರ ಮಗ ಹೆಚ್ ಡಿ ಕುಮಾರಸ್ವಾಮಿಯವರು ತಂದೆಯಿಂದ ಕಲಿಯಬೇಕು ಎಂದಿದ್ದರು. ಆರ್ ಎಸ್ ಎಸ್ ಈ ದೇಶದಲ್ಲಿ ರಹಸ್ಯ ಅಜೆಂಡಾವನ್ನು ಇಟ್ಟುಕೊಂಡು ಅಧಿಕಾರಿಗಳ ತಂಡವನ್ನು ಕಟ್ಟಿಕೊಂಡು ಆಡಳಿತ ನಡೆಸುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು.
ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡ, ''ಸುಳ್ಳು ಹೇಳುವುದಕ್ಕೆ ಮಿತಿಯಿರಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು ಬಿಟ್ಟರೆ ನನಗೂ ಆರ್ ಎಸ್ ಎಸ್ ಗೂ ಯಾವುದೇ ಸಂಬಂಧವಿಲ್ಲ. ಬ್ಯಾಂಕ್ವೆಟ್ ಹಾಲ್ ನ್ನು ದುರುಪಯೋಗಪಡಿಸಿಕೊಂಡಿದ್ದಕ್ಕೆ ನಾನು ಆಗ ಆಕ್ಷೇಪ ವ್ಯಕ್ತಪಡಿಸಿದ್ದೆ ಎಂದು ಹೇಳಿದ್ದಾರೆ.
ಆರ್ಎಸ್ಎಸ್ ತನ್ನ ರಚನಾತ್ಮಕ ವರ್ಷಗಳಲ್ಲಿ ಮಾಡಿದ ಕೆಲಸವನ್ನು ಎಲ್ಲರೂ ಮೆಚ್ಚಿದ್ದಾರೆ, ಆದರೆ ಇಂದು ಅದರ ಕೆಲಸ-ಕಾರ್ಯಗಳು ಭಿನ್ನವಾಗಿದೆ. "ಹೆಡ್ಗೆವಾರ್ (ಆರ್ಎಸ್ಎಸ್ನ ಸರಸಂಚಾಲಕ ಸ್ಥಾಪಕ) ಸಂಘ ಅಥವಾ ಅಂದಿನ ಆರ್ಎಸ್ಎಸ್ ಮಾಡಿದ ಕೆಲಸವು ಇಂದು ಮಾಡುತ್ತಿರುವ ಕೆಲಸಕ್ಕಿಂತ ಭಿನ್ನವಾಗಿತ್ತು. ಇಂದು ಮತ್ತು ಅಂದಿನ ಆರ್ ಎಸ್ ಎಸ್ ಗೂ ಯಾವುದೇ ಸಂಬಂಧವಿಲ್ಲ" ಎಂದು ದೇವೇಗೌಡರು ಹೇಳಿದರು.
ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪಚುನಾವಣೆಗೆ ಮುಸ್ಲಿಮರನ್ನು ಕಣಕ್ಕಿಳಿಸುವ ತನ್ನ ಪಕ್ಷದ ನಿರ್ಧಾರವನ್ನು ಗೌಡರು ಸಮರ್ಥಿಸಿಕೊಂಡರು, ಕಾಂಗ್ರೆಸ್ ತನ್ನ ಸಂಭಾವ್ಯ ಅಭ್ಯರ್ಥಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನೋಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಇದು ತಮಗೆ ಅನಿವಾರ್ಯವಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments