Webdunia - Bharat's app for daily news and videos

Install App

ಇದು ನನ್ನ ಪುನರ್ಜನ್ಮ: ಜಯಲಲಿತಾ

Webdunia
ಸೋಮವಾರ, 14 ನವೆಂಬರ್ 2016 (16:57 IST)
50 ದಿನಗಳಿಗಿಂತಲೂ ಹೆಚ್ಚು ದಿನಗಳಿಂದ ಆಸ್ಪತ್ರೆಯಲ್ಲಿದ್ದ ಜಯಲಲಿತಾ ಇದೇ ಮೊದಲ ಬಾರಿಗೆ ಅಧಿಕೃತ ಹೇಳಿಕೆಯನ್ನು ನೀಡಿದ್ದು, ನನಗೆ ಪುನರ್ಜನ್ಮ ಸಿಕ್ಕಿದೆ ಎಂದಿದ್ದಾರೆ.
ತಮಿಳುನಾಡು ಜನರ ಮತ್ತು ಇತರ ರಾಜ್ಯಗಳ ಮತ್ತು ಜಗತ್ತಿನಾದ್ಯಂತ ಇರುವ ನನ್ನ ಬೆಂಬಲಿಗರ ನಿರಂತರ ಪ್ರಾರ್ಥನೆ, ಹರಕೆಗಳ ಫಲವಾಗಿ ನನಗೆ ಪುನರ್ಜನ್ಮ ಸಿಕ್ಕಿದೆ. ಇದನ್ನು ಹೇಳಲು ನನಗೆ ಸಂತೋಷವಾಗುತ್ತಿದೆ. ಜನರ ಪ್ರೀತಿ ನನ್ನ ಮೇಲಿರುವುದರಿಂದ ಯಾವ ಕೆಟ್ಟ ಶಕ್ತಿಯೂ ನನ್ನನ್ನು ಬಾಧಿಸಲು. ದೇವರ ದಯೆಯಿಂದ ಸಂಪೂರ್ಣ ಗುಣಮುಖಳಾಗಿ ಜನರ ಸೇವೆಗಿಳಿಯುತ್ತೇನೆ ಎಂದು ಜಯಾ ಹೇಳಿದ್ದಾರೆ. 
 
ಎಐಡಿಎಂಕೆ ಪ್ರಧಾನ ಕಚೇರಿಯಲ್ಲಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ನೀಡಿರುವ 2 ಪುಟಗಳ ಹೇಳಿಕೆಯನ್ನು ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ಜಯಾ, ತಂಜಾವೂರು, ಅರಾವಕ್ಕುರುಚಿ, ತಿರುಪ್ಪರನ್ ಕುಂಡ್ರಂ ಮತ್ತು ಪಾಂಡಿಚೇರಿಯ ನೆಲ್ಲಿ ದೊಪೆ ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 19ರಂದು ನಡೆಯಲಿರುವ ಚುನಾವಣೆಗಳಲ್ಲಿ ತಮ್ಮ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
 
ತಮಗೆ ಅನಾರೋಗ್ಯವಾಗಿದ್ದರಿಂದ ನೊಂದು ಆತ್ಮಹತ್ಯೆಗೆ ಶರಣಾದ ಪಕ್ಷದ ಕಾರ್ಯಕರ್ತರನ್ನು ನೆನೆಸಿ ಅವರು ದುಃಖವನ್ನು ವ್ಯಕ್ತ ಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments