Webdunia - Bharat's app for daily news and videos

Install App

ನನ್ನ ನಿರಪರಾಧಿತ್ವ ಸಾಬೀತು ಪಡಿಸಲು ವಿಡಿಯೋ ಸಾಕ್ಷ್ಯವಿದೆ: ಮೋಹನಿಯಾ

Webdunia
ಶುಕ್ರವಾರ, 1 ಜುಲೈ 2016 (17:49 IST)
ತಾನು ನಿರಪರಾಧಿ ಎಂಬುದಕ್ಕೆ ವಿಡಿಯೋ ಸಾಕ್ಷ್ಯವಿದೆ ಎಂದು ಲೈಂಗಿಕ ದೌರ್ಜನ್ಯ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಡಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಆಮ್ ಆದ್ಮಿ ಶಾಸಕ ದಿನೇಶ್ ಮೋಹನಿಯಾ ಹೇಳಿದ್ದಾರೆ. 

ನನ್ನ ನಿರಪರಾಧಿತನವನ್ನು ಸಾಬೀತು ಪಡಿಸಲು ನನ್ನ ಬಳಿ ವಿಡಿಯೋ ಸಾಕ್ಷ್ಯವಿದೆ. ನನ್ನ  ಮತ್ತು ಆಪ್ ಪಕ್ಷದ ವಿರುದ್ಧ ರಾಜಕೀಯ ಪಿತೂರಿ ನಡೆಸಲಾಗಿದೆ. ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ಭರವಸೆ ಇದೆ. ಆ ಭರವಸೆಯ ಮೇಲೆಯೇ ನನ್ನ ಮೇಲೆ ಇಷ್ಟು ದೊಡ್ಡ ಪಿತೂರಿ ನಡೆದರೂ ನಾನು ನಿರಾಳನಾಗಿದ್ದೇನೆ ಎಂದಿದ್ದಾರೆ ಅವರು. 
 
ಕೇಂದ್ರ ಸರ್ಕಾರದ ಮೇಲೆ ಕಿಡಿಕಾರಿದ ಅವರು, ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಚುನಾವಣಾ ಸಮಯದಲ್ಲಿ ನೀಡಿದ್ದ ವಾಗ್ದಾನಗಳನ್ನು ಈಡೇರಿಸಲು ವಿಫಲವಾಗಿದೆ. ಆದರೆ ಆಪ್ ಸರ್ಕಾರ ಉತ್ತಮ ಆಡಳಿತಕ್ಕೆ ಉದಾಹರಣೆ ಎನ್ನಿಸಿಕೊಂಡಿದೆ. ತಮ್ಮ ವಿಫಲತೆಯಿಂದ ಮಾಧ್ಯಮಗಳ ಗಮನವನ್ನು ಬೇರೆಡೆ ಸೆಳೆಯಲು  ಕೇಂದ್ರ ಸರ್ಕಾರ ಕುತಂತ್ರವನ್ನು ನಡೆಸುತ್ತಿದೆ. ಇದರ ಭಾಗವಾಗಿಯೇ ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಲಾಗಿದೆ. ನನ್ನ ನಿರಪರಾಧಿತ್ವವನ್ನು ಸಾಬೀತು ಪಡಿಸಲು ವಿಡಿಯೋ ಸಾಕ್ಷ್ಯ ನನ್ನ ಬಳಿ ಇದೆ. ನ್ಯಾಯಾಲಯದಲ್ಲಿ ನಾನದನ್ನು ಪ್ರಸ್ತುತ ಪಡಿಸುತ್ತೇನೆ. ಅದು ನನ್ನ ವಿರುದ್ಧದ ರಾಜಕೀಯ ಪಿತೂರಿಯನ್ನು ಬಹಿರಂಗ ಪಡಿಸಲಿದೆ ಎಂದು ಶಾಸಕರು ಹೇಳಿದ್ದಾರೆ.
 
ಶನಿವಾರ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಸಂದರ್ಭದಲ್ಲಿ ಅವರನ್ನು ಬಂಧಿಸಲಾಗಿತ್ತು. ತನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮಹಿಳೆಯೊಬ್ಬಳು ದೂರು ನಿಡಿದ ಬಳಿಕ ಶಾಸಕರಿಗೆ ಹಲವಾರು ಬಾರಿ ಸಮನ್ಸ್ ನೀಡಲಾಗಿತ್ತು. ಆದರೆ ಅವರದನ್ನು ನಿರ್ಲಕ್ಷಿಸಿದ್ದರಿಂದ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಇಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ದಿಢೀರ್‌ ಕ್ಯಾನ್ಸಲ್‌, ಕಾರಣ ಇಲ್ಲಿದೆ

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

ಮಂಡ್ಯದ ಜನತೆ ಪರ ಧ್ವನಿ ಎತ್ತಿ ಸರ್ಕಾರದ ವಿರುದ್ಧ ಸುಮಲತಾ ಅಂಬರೀಶ್ ಆಕ್ರೋಶ

ಥಗ್ ಲೈಫ್ ಸಿನಿಮಾಗೆ ಸುಪ್ರೀಂಕೋರ್ಟ್ ಪರ್ಮಿಷನ್ ಕೊಟ್ರೂ ಕರ್ನಾಟಕದಲ್ಲಿ ಬಿಡುಗಡೆಯಾಗಲ್ಲ

ಮುಂದಿನ ಸುದ್ದಿ