Webdunia - Bharat's app for daily news and videos

Install App

ಜನತೆ ಬಯಸಿದಲ್ಲಿ ರಾಜಕೀಯಕ್ಕೆ ಧುಮುಕುತ್ತೇನೆ: ಹಾರ್ದಿಕ್ ಪಟೇಲ್

Webdunia
ಗುರುವಾರ, 1 ಅಕ್ಟೋಬರ್ 2015 (17:33 IST)
ಪಟಿದಾರ್ ಅನಾಮತ್ ಅಂದೋಲನ್ ಸಮಿತಿಯ ನಾಯಕ ಹಾರ್ದಿಕ್ ಪಟೇಲ್, ಅಖಿಲ್ ಭಾರತೀಯ ಪಟೇಲ್ ನವನಿರ್ಮಾಣ ಸೇನೆಯನ್ನು ಸ್ಥಾಪಿಸಿದ್ದು, ಜನತೆ ಬಯಸಿದಲ್ಲಿ ರಾಜಕೀಯ ಪ್ರವೇಶಿಸುವುದಾಗಿ ಹೇಳಿದ್ದಾರೆ.
 
ಸಮಯ ಬಂದಾಗ ರಾಜಕೀಯ ಪ್ರವೇಶಿಸುವ ಬಗ್ಗೆ ಚಿಂತನೆ ನಡೆಸುತ್ತೇವೆ. ಇದು ನಾನೊಬ್ಬನೆ ನಿರ್ಧರಿಸುವ ವಿಷಯವಲ್ಲ. ಪಟೇಲ್ ಸಮುದಾಯದ ನಾಯಕರು ಒಂದಾಗಿ ತೆಗೆದುಕೊಳ್ಳುವ ತೀರ್ಮಾನವಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
 
ದೆಹಲಿ ಮುಖ್ಯಮಂತ್ರಿಯಾದ ಅರವಿಂದ್ ಕೇಜ್ರಿವಾಲ್ ಕೂಡಾ ಆರಂಭದಲ್ಲಿ ಪ್ರತಿಭಟನೆಯ ದಾರಿ ಹಿಡಿದಿದ್ದರೂ ನಂತರ ರಾಜಕೀಯ ಪ್ರವೇಶಿಸಿ ಮುಖ್ಯಮಂತ್ರಿಯಾಗಿದ್ದಾರೆ. ಅದರಂತೆ, ನಿಮಗೆ ರಾಜಕೀಯ ಪ್ರವೇಶಿಸುವ ಇರಾದೆಯಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯ ಪ್ರವೇಶಿಸುವ ನಿರ್ಧಾರ ತುಂಬಾ ಮಹತ್ವದ್ದಾಗಿದ್ದರಿಂದ ಅದಕ್ಕೆ ಸಮಯದ ಅಗತ್ಯವಿದೆ ಎಂದರು.
 
22 ವರ್ಷ ವಯಸ್ಸಿನ ಹಾರ್ದಿಕ್ ಪಟೇಲ್, ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದಾರೆ.  ಕುರ್ಮಿಗಳು, ಮರಾಠರು, ಪಟಿದಾರ್ ಮತ್ತು ಗುಜ್ಜರ್ ಸಮುದಾಯಗಳನ್ನು ಒಂದುಗೂಡಿಸಿ, ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಯುವಕರ ಪರವಾಗಿ ಅಖಿಲ್ ಭಾರತೀಯ ಪಟೇಲ್ ನವನಿರ್ಮಾಣ ಸೇನೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.
 
ಅಖಿಲ್ ಭಾರತೀಯ ಪಟೇಲ್ ನವನಿರ್ಮಾಣ ಸೇನೆಯ ಪ್ರಧಾನ ಕಾರ್ಯದರ್ಶಿಯಾಗಿ ಅಖಿಲೇಶ್ ಕಟಿಯಾರ್ ಕಾರ್ಯನಿರ್ವಹಿಸಲಿದ್ದಾರೆ ಎಂದು ಹಾರ್ದಿಕ್ ಪಟೇಲ್ ಮಾಹಿತಿ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments