Webdunia - Bharat's app for daily news and videos

Install App

ನೋಟು ನಿಷೇಧ ಹೇರಿ ದೇಶವನ್ನು ಉಳಿಸಿದ್ದೇನೆ: ಪ್ರಧಾನಿ ಮೋದಿ

Webdunia
ಭಾನುವಾರ, 25 ಡಿಸೆಂಬರ್ 2016 (11:16 IST)
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ದೇಶಾದ್ಯಂತ ನೋಟು ನಿಷೇಧ ಹೇರುವ ಮೂಲಕ ದೇಶವನ್ನು ಉಳಿಸಿದ್ದೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
 
ಒಂದು ವೇಳೆ ಹಿಂದಿನ ಸರಕಾರಗಳು ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧ ಕ್ರಮಕೈಗೊಂಡಿದ್ದಲ್ಲಿ ಕಠಿಣವಾದ ನೋಟು ನಿಷೇಧ ಹೇರುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ನೋಟು ನಿಷೇಧವನ್ನು ಸಮರ್ಥಿಸಿಕೊಂಡಿದ್ದಾರೆ.
 
ಕಳೆದ 40 ವರ್ಷಗಳಲ್ಲಿ ಸಮಯಕ್ಕೆ ತಕ್ಕಂತೆ ಸರಕಾರಗಳು ಭ್ರಷ್ಟರನ್ನು ಮಟ್ಟ ಹಾಕಿ ಕಪ್ಪು ಹಣದ ಕುಳಗಳಿಗೆ ತಕ್ಕ ಶಿಕ್ಷೆ ವಿಧಿಸಿದ್ದಲ್ಲಿ ಇಂತಹ ಕಠಿಣ ಸ್ಥಿತಿ ಎದುರಾಗುತ್ತಿರಲಿಲ್ಲ ಎಂದಿದ್ದಾರೆ.
 
ದೇಶಾದ್ಯಂತ ಭ್ರಷ್ಟಾಚಾರ ಮತ್ತು ಕಪ್ಪು ಹಣ ತಾಂಡವವಾಡುತ್ತಿತ್ತು. ನಾನು ನೀಡಿದ ಆಶ್ವಾಸನೆಯಂತೆ ನೋಟು ನಿಷೇಧ ಹೇರುವ ಮೂಲಕ ದೇಶವನ್ನು ಉಳಿಸಿದ್ದೇನೆ ಎಂದು ಪುಣೆ ಮೆಟ್ರೋ ಪ್ರೊಜೆಕ್ಟ್ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.
 
ನೋಟು ನಿಷೇಧವನ್ನು ಸಮರ್ಥಿಸಿಕೊಂಡ ಅವರು, ಭ್ರಷ್ಟಾಚಾರಗಳು ಮತ್ತು ಕಪ್ಪು ಹಣ ಹೊಂದಿದವರು ಕೂಡಲೇ ಸರಕಾರದ ಆದೇಶವನ್ನು ಪಾಲಿಸಿ ಪ್ರಾಮಾಣಿಕರಾಗಬೇಕು. ಇಲ್ಲವಾದಲ್ಲಿ ಅಂತಹ ವ್ಯಕ್ತಿಗಳಿಗೆ ಮುಂದೆ ಕಾದಿದೆ ಮಾರಿಹಬ್ಬ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
 
ನೋಟು ನಿಷೇಧ ಹೇರಿದ ನಂತರ ಭ್ರಷ್ಟರು ನಿದ್ರೆಯನ್ನು ಮರೆತಿದ್ದರೆ ಪ್ರಾಮಾಣಕರು ನಿಶ್ಚಿಂತೆಯಿಂದ ನಿದ್ದೆ ಮಾಡುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸಿದ್ದರಾಮಯ್ಯಗೆ ತಲೆಸುತ್ತು: ಇಂದು ಫುಲ್ ರೆಸ್ಟ್

ರೈಲ್ವೆ ಹಳಿ ಬಳಿ ಶಾಲಾ ವ್ಯಾನ್ ಅಪಘಾತ: ಇಬ್ಬರು ಮಕ್ಕಳು ಸೇರಿ ಮೂವರು ಸಾವು, ಹಲವರಿಗೆ ಗಾಯ

ಅಮೆರಿಕಾದಲ್ಲಿ ಕಾರು ಅಪಘಾತದಲ್ಲಿ ಬಲಿಯಾದ ಹೈದರಾಬಾದ್ ಕುಟುಂಬ

ಅನ್ನರಾಮಯ್ಯ ಎಂದು ಕೊಚ್ಚಿಕೊಳ್ಳುವವರು ಬಾಕಿ ದುಡ್ಡು ಕೊಟ್ಟಿಲ್ಲ ಯಾಕೆ: ಬಿವೈ ವಿಜಯೇಂದ್ರ

ಕರ್ನಾಟಕಕ್ಕೆ ಯಾವಾಗ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ, ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments