Webdunia - Bharat's app for daily news and videos

Install App

ಮಾಸಿಕ ಕಂತುಗಳಲ್ಲಿ ಲಂಚ: ಆದಾಯ ತೆರಿಗೆ ಅಧಿಕಾರಿ ಸಿಬಿಐ ಬಲೆಗೆ

Webdunia
ಗುರುವಾರ, 29 ಡಿಸೆಂಬರ್ 2016 (14:38 IST)
ನೋಟು ನಿಷೇಧದಿಂದಾಗಿ ಜನತೆಗೆ ಹೊಸ ನೋಟುಗಳಲ್ಲಿ ಲಂಚ ಕೊಡುವುದು ಕೂಡಾ ಕಠಿಣವಾಗಿದೆ. ಆದರೆ, ಕೆಲ ಅಧಿಕಾರಿಗಳು ವಿಚಿತ್ರ ದಾರಿಗಳನ್ನು ಕಂಡು ಹಿಡಿಯುತ್ತಿದ್ದು, ಲಂಚದ ಹಣವನ್ನು ಮಾಸಿಕ ಕಂತುಗಳಲ್ಲಿ ನೀಡುವಂತೆ ಒತ್ತಾಯಿಸಿದ ವಿಚತ್ರ ಘಟನೆ ವರದಿಯಾಗಿದೆ. 
 
ವಿಶಾಖಪಟ್ಟಣಂ ನಗರದ ಆದಾಯ ತೆರಿಗೆ ಆಧಿಕಾರಿಯೊಬ್ಬರು ಲಂಚದ ಹಣವನ್ನು ಮಾಸಿಕವಾಗಿ ಪಡೆಯುತ್ತಿರುವ ಸಂದರ್ಭದಲ್ಲಿ  ಬಲೆಗೆ ಬಿದ್ದಿದ್ದಾರೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
 
ಆದಾಯ ತೆರಿಗೆ ಅಧಿಕಾರಿ ಬಿ.ಶ್ರೀನಿವಾಸ್ ರಾವ್, ಬಿಲ್ಡರ್‌ರೊಬ್ಬರಿಗೆ ಪುನರ್‌ನಿರ್ಮಾಣಕ್ಕಾಗಿ ಖಾಲಿ ನಿವೇಶನ ನೀಡಿದ ವ್ಯಕ್ತಿಗೆ 1.5 ಲಕ್ಷ ರೂಪಾಯಿ ಲಂಚ ನೀಡುವಂತೆ ಒತ್ತಾಯಿಸಿದ್ದಾರೆ.   
 
ಶ್ರೀನಿವಾಸ್ ಒತ್ತಡದಿಂದ ಕಂಗಾಲಾದ ವ್ಯಕ್ತಿ, ನೋಟು ನಿಷೇಧದಿಂದಾಗಿ ಬ್ಯಾಂಕ್‌ಗಳಲ್ಲಿ ಹಣ ಹಿಂಪಡೆಯುವುದು ಕಷ್ಟವಾದ ಹಿನ್ನೆಲೆಯಲ್ಲಿ ಲಂಚದ ಹಣ ಒಂದೇ ಬಾರಿಗೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾನೆ.  
 
ಶ್ರೀನಿವಾಸ್ ರಾವ್, ಲಂಚದ ಹಣವನ್ನು ಮಾಸಿಕ ಕಂತುಗಳಲ್ಲಿ ನೀಡುವಂತೆ ವ್ಯಕ್ತಿಗೆ ತಿಳಿಸಿದ್ದಾರೆ. ಮೊದಲ ಮಾಸಿಕ ಕಂತು 30ಸಾವಿರ ರೂಪಾಯಿ ಪಾವತಿಸುವ ಸಂದರ್ಭದಲ್ಲಿ ಸಿಬಿಐ ಅಧಿಕಾರಿಗಳಉ ಆದಾಯ ತೆರಿಗೆ ಇಲಾಖೆ ಅಧಿಕಾರಿ ಶ್ರೀನಿವಾಸ್ ರಾವ್ ಅವರನ್ನು ರೆಡ್‌ಹ್ಯಾಂಡಾಗಿ ಬಂಧಿಸಿದ್ದಾರೆ.    

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments