Webdunia - Bharat's app for daily news and videos

Install App

ಮಾಸಿಕ ಕಂತುಗಳಲ್ಲಿ ಲಂಚ: ಆದಾಯ ತೆರಿಗೆ ಅಧಿಕಾರಿ ಸಿಬಿಐ ಬಲೆಗೆ

Webdunia
ಗುರುವಾರ, 29 ಡಿಸೆಂಬರ್ 2016 (14:38 IST)
ನೋಟು ನಿಷೇಧದಿಂದಾಗಿ ಜನತೆಗೆ ಹೊಸ ನೋಟುಗಳಲ್ಲಿ ಲಂಚ ಕೊಡುವುದು ಕೂಡಾ ಕಠಿಣವಾಗಿದೆ. ಆದರೆ, ಕೆಲ ಅಧಿಕಾರಿಗಳು ವಿಚಿತ್ರ ದಾರಿಗಳನ್ನು ಕಂಡು ಹಿಡಿಯುತ್ತಿದ್ದು, ಲಂಚದ ಹಣವನ್ನು ಮಾಸಿಕ ಕಂತುಗಳಲ್ಲಿ ನೀಡುವಂತೆ ಒತ್ತಾಯಿಸಿದ ವಿಚತ್ರ ಘಟನೆ ವರದಿಯಾಗಿದೆ. 
 
ವಿಶಾಖಪಟ್ಟಣಂ ನಗರದ ಆದಾಯ ತೆರಿಗೆ ಆಧಿಕಾರಿಯೊಬ್ಬರು ಲಂಚದ ಹಣವನ್ನು ಮಾಸಿಕವಾಗಿ ಪಡೆಯುತ್ತಿರುವ ಸಂದರ್ಭದಲ್ಲಿ  ಬಲೆಗೆ ಬಿದ್ದಿದ್ದಾರೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
 
ಆದಾಯ ತೆರಿಗೆ ಅಧಿಕಾರಿ ಬಿ.ಶ್ರೀನಿವಾಸ್ ರಾವ್, ಬಿಲ್ಡರ್‌ರೊಬ್ಬರಿಗೆ ಪುನರ್‌ನಿರ್ಮಾಣಕ್ಕಾಗಿ ಖಾಲಿ ನಿವೇಶನ ನೀಡಿದ ವ್ಯಕ್ತಿಗೆ 1.5 ಲಕ್ಷ ರೂಪಾಯಿ ಲಂಚ ನೀಡುವಂತೆ ಒತ್ತಾಯಿಸಿದ್ದಾರೆ.   
 
ಶ್ರೀನಿವಾಸ್ ಒತ್ತಡದಿಂದ ಕಂಗಾಲಾದ ವ್ಯಕ್ತಿ, ನೋಟು ನಿಷೇಧದಿಂದಾಗಿ ಬ್ಯಾಂಕ್‌ಗಳಲ್ಲಿ ಹಣ ಹಿಂಪಡೆಯುವುದು ಕಷ್ಟವಾದ ಹಿನ್ನೆಲೆಯಲ್ಲಿ ಲಂಚದ ಹಣ ಒಂದೇ ಬಾರಿಗೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾನೆ.  
 
ಶ್ರೀನಿವಾಸ್ ರಾವ್, ಲಂಚದ ಹಣವನ್ನು ಮಾಸಿಕ ಕಂತುಗಳಲ್ಲಿ ನೀಡುವಂತೆ ವ್ಯಕ್ತಿಗೆ ತಿಳಿಸಿದ್ದಾರೆ. ಮೊದಲ ಮಾಸಿಕ ಕಂತು 30ಸಾವಿರ ರೂಪಾಯಿ ಪಾವತಿಸುವ ಸಂದರ್ಭದಲ್ಲಿ ಸಿಬಿಐ ಅಧಿಕಾರಿಗಳಉ ಆದಾಯ ತೆರಿಗೆ ಇಲಾಖೆ ಅಧಿಕಾರಿ ಶ್ರೀನಿವಾಸ್ ರಾವ್ ಅವರನ್ನು ರೆಡ್‌ಹ್ಯಾಂಡಾಗಿ ಬಂಧಿಸಿದ್ದಾರೆ.    

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಮುಂದಿನ ಸುದ್ದಿ
Show comments