Webdunia - Bharat's app for daily news and videos

Install App

8 ತಿಂಗಳವರೆಗೆ ಪ್ರತಿ ರಾತ್ರಿ ಯುವತಿಯ ಮೇಲೆ ರೇಪ್ ಎಸಗಿದ ನಕಲಿ ದೇವಮಾನವ

Webdunia
ಗುರುವಾರ, 28 ಸೆಪ್ಟಂಬರ್ 2017 (16:16 IST)
ಹದಿಹರೆಯದ ಯುವತಿಯ ಮೇಲೆ ಪದೇ ಪದೇ ಅತ್ಯಾಚಾರ ಮಾಡಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಸಿಯಾ ರಾಮ್‌ದಾಸ್‌ನನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ. 
ಯುವತಿಯ ಮೇಲೆ ಎಂಟು ತಿಂಗಳುಗಳವರೆಗೂ ನಕಲಿ ಸ್ವಯಂಘೋಷಿತ ದೇವಮಾನವ ದಾಸ್ ಪ್ರತಿ ರಾತ್ರಿ ಅತ್ಯಾಚಾರೆವಸಗಿದ್ದಾನೆ. ನಂತರ ಆತನ ಶಿಷ್ಯಂದಿರು ಕೂಡಾ ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ ದೂರು ನೀಡಿದ್ದಾಳೆ.
 
ಸಂಬಂಧಿಕರು ಯುವತಿಯನ್ನು 50 ಸಾವಿರ ರೂಪಾಯಿಗಳಿಗಾಗಿ ಸಿಯಾ ರಾಮ್ ದಾಸ್‌ಗೆ ಮಾರಾಟ ಮಾಡಿದ್ದರು.ನಂತರ ಆಕೆಯನ್ನು ಲಕ್ನೋ ನಗರಕ್ಕೆ ಕರೆದುಕೊಂಡು ಹೋಗಲಾಯಿತು. ತದನಂತರ ಆಕೆಯನ್ನು ಬಾಬಾನ ಆಶ್ರಮವಾದ ಮಿಶ್ರಿಕಿ ಪಟ್ಟಣಕ್ಕೆ ಕರೆದುಕೊಂಡು ಹೋಗಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
 
ಯುವತಿಯ ಪ್ರಕಾರ ಆರೋಪಿ ಬಾಬಾ ಯುವತಿಯ ಎಂಎಂಎಸ್ ಮಾಡಿ ಯಾರಿಗಾದರೂ ಮಾಹಿತಿ ನೀಡಿದಲ್ಲಿ ಎಂಎಂಎಸ್ ಬಹಿರಂಗಪಡಿಸುವುದಾಗಿ ಬೆದರಿಕೆಯೊಡ್ಡಿದ್ದ. ನಂತರ ಆಗ್ರಾದಲ್ಲಿರುವ ಮತ್ತೊಂದು ಆಶ್ರಮಕ್ಕೆ ಕರೆದುಕೊಂಡು ಹೋದಾಗ ಅಲ್ಲಿದ್ದ ಬೇರೇ ಬೇರೆ ಪುರುಷರು ನಿರಂತರವಾಗಿ 8 ತಿಂಗಳುಗಳ ಕಾಲ ಅತ್ಯಾಚಾರವೆಸಗಿದ್ದಾರೆ.
 
ಯುವತಿ ಮತ್ತೆ ಮಿಶ್ರಿಕಿ ಆಶ್ರಮಕ್ಕೆ ಬಂದಾಗ ಬಾಬಾ ಮತ್ತೆ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆದರೆ ಅದು ಹೇಗೋ ಆತನ ಮೊಬೈಲ್‌ ಕಸಿದುಕೊಂಡ ಯುವತಿ ಪೊಲೀಸರಿಗೆ ಕರೆ ಮಾಡಿದ್ದಾಳೆ
 
ಬಾಬಾ ಸಿಯಾ ರಾಮ್ ದಾಸ್ ಸಂಚಾಲಿತ ಶಾಲೆಯಲ್ಲಿರುವ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಶಾಲಾ ವಿದ್ಯಾರ್ಥಿನಿಯರು ಕೇವಲ ಅತ್ಯಾಚಾರಕ್ಕೆ ಒಳಗಾಗಲಿಲ್ಲ. ವಿದ್ಯಾರ್ಥಿನಿಯರನ್ನು ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಸರಬರಾಜು ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.
 
ಸೀತಾಪುರ್ ಪೊಲೀಸರು ನಕಲಿ ದೇವಮಾನವ ಸಿಯಾ ರಾಮ್ ದಾಸ್ ವಿರುದ್ಧ ರೇಪ್ ಕೇಸ್ ದಾಖಲಿಸಿ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸ್ವಯಂ-ಘೋಷಿತ ದೇವಮಾನವ ಸಿಯಾ ರಾಮ್ ದಾಸ್, ಎಲ್ಲಾ ಆರೋಪಗಳನ್ನು ನಿರಾಕರಿಸಿ ಹಿಂದೆಂದೂ ಯುವತಿಯನ್ನೇ ಭೇಟಿ ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ