Webdunia - Bharat's app for daily news and videos

Install App

ರಾಹುಲ್ ವಿರುದ್ಧ ಮಾನಹಾನಿ ಕೇಸ್ ದಾಖಲಿಸುತ್ತೇನೆ : ಅಸ್ಸಾಂ ಸಿಎಂ

Webdunia
ಸೋಮವಾರ, 10 ಏಪ್ರಿಲ್ 2023 (08:25 IST)
ಗುವಾಹಟಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸುವುದಾಗಿ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
 
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅದಾನಿ ಸಮೂಹಕ್ಕೂ ತಮಗೂ ಸಂಬಂಧ ಇದೆ ಎಂಬ ಅರ್ಥ ಬರುವಂತೆ ರಾಹುಲ್ ಗಾಂಧಿ ಶನಿವಾರ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಮಾನಹಾನಿಕರವಾಗಿದ್ದು ರಾಹುಲ್ ವಿರುದ್ಧ ಗುವಾಹಟಿಯಲ್ಲೇ ಕೇಸ್ ದಾಖಲಿಸುವುದಾಗಿ ಸಿಎಂ ತಿಳಿಸಿದ್ದಾರೆ. 

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಕೆಲವು ನಾಯಕರನ್ನು ಗುರಿಯಾಗಿಸಿ, ರಾಹುಲ್ ಗಾಂಧಿ ಅವರು ಶನಿವಾರ ಟ್ವೀಟ್ ಮಾಡಿದ್ದರು. ಇಂಗ್ಲಿಷ್ನಲ್ಲಿ ಅದಾನಿ ಹೆಸರನ್ನು ದೊಡ್ಡದಾಗಿ ಬರೆದು, ಕಾಂಗ್ರೆಸ್ ತೊರೆದ ನಾಯಕರ ಹೆಸರುಗಳನ್ನು ಅದಾನಿಯ ಇಂಗ್ಲಿಷ್ ಹೆಸರಿಗೆ ಹೊಂದುವಂತೆ ಜೋಡಿಸಿ ಟ್ವೀಟ್ ಮಾಡಿದ್ದರು.

ಗುಲಾಂ ನಬಿ ಆಜಾದ್, ಜೋತಿರಾಧಿತ್ಯ ಸಿಂಧಿಯಾ, ಹಿಮಂತ ಬಿಸ್ವಾ ಶರ್ಮಾ, ಕಿರಣ್ ಕುಮಾರ್ ರೆಡ್ಡಿ ಹಾಗೂ ಅನಿಲ್ ಕೆ. ಆ್ಯಂಟನಿ ಅವರ ಹೆಸರುಗಳನ್ನು ರಾಹುಲ್ ತಮ್ಮ ಟ್ವೀಟ್ನಲ್ಲಿ ಉಲ್ಲೇಖಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಕೆಎನ್ ರಾಜಣ್ಣ ವಜಾ ಇಫೆಕ್ಟ್: ರಾಹುಲ್ ಗಾಂಧಿ ಕೆಲಸದಿಂದ ಇವರಿಗೆಲ್ಲಾ ನಡುಕ ಶುರು

ಮುಂದಿನ ಸುದ್ದಿ
Show comments