Webdunia - Bharat's app for daily news and videos

Install App

ನಾನು ಚೌಕಿದಾರ್ ಆಗಲ್ಲ-ಮೋದಿಗೆ ಟಾಂಗ್ ನೀಡಿದ ಬಿಜೆಪಿ ಸಂಸದ

Webdunia
ಸೋಮವಾರ, 25 ಮಾರ್ಚ್ 2019 (06:52 IST)
ನವದೆಹಲಿ : ಭಾರತದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪ್ರತಿಯೊಬ್ಬರು ಚೌಕಿದಾರರೇ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ನಾನು ಚೌಕಿದಾರ್ ಅಲ್ಲ, ಬ್ರಾಹ್ಮಣ ಎಂದು ಹೇಳುವುದರ ಮೂಲಕ ಪ್ರಧಾನಿ ಮೋದಿಗೆ ಟಾಂಗ್ ನೀಡಿದ್ದಾರೆ.


ಪ್ರಧಾನಿ ಮೋದಿ ಅವರು ಮಾರ್ಚ್ 16ರಂದು `ನಾನೂ ಕೂಡ ಚೌಕಿದಾರ’ #MainBhiChowkidar ಎಂದು ಹೇಳಿ ವಿಡಿಯೋ ಒಂದನ್ನು ಅಪ್ಲೋಡ್ ಮಾಡಿ ಜೊತೆಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿರುವ ಹೆಸರಿನ ಮುಂದೆ `ಚೌಕಿದಾರ’ ಎಂದು ಸೇರಿಸಿಕೊಂಡಿದ್ದರು. ಮೋದಿ ಹೆಸರು ಬದಲಾಯಿಸಿದ ಬೆನ್ನಲ್ಲೇ ಬಿಜೆಪಿ ನಾಯಕರು ಮತ್ತು ಮೋದಿ ಅಭಿಮಾನಿಗಳು ತಮ್ಮ ಹೆಸರಿನ ಮುಂದೆ ಚೌಕಿದಾರ ಎಂದು ಸೇರಿಸಿದ್ದಾರೆ.


ಆದರೆ ತಮಿಳು ವಾಹಿನಿಯೊಂದರ ಸಂದರ್ಶನದಲ್ಲಿ, ನಿಮ್ಮ ಟ್ವೀಟ್ ಖಾತೆಯ ಹೆಸರಿನ ಮುಂದೆ ಚೌಕಿದಾರ್ ಅಂತ ಯಾಕೆ ಸೇರಿಸಿಲ್ಲ ಎಂದು ವರದಿಗಾರರು  ಸುಬ್ರಮಣಿಯನ್ ಸ್ವಾಮಿಯನ್ನು  ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಚೌಕಿದಾರ್ ಆಗುವುದಿಲ್ಲ. ಯಾಕೆಂದರೆ ನಾನು ಬ್ರಾಹ್ಮಣ. ಹೀಗಾಗಿ ಬ್ರಾಹ್ಮಣರು ಚೌಕಿದಾರ್ ಆಗಲು ಸಾಧ್ಯವಿಲ್ಲ. ಇದು ಸತ್ಯ ಕೂಡ ಎಂದು ಹೇಳಿದ್ದಾರೆ.


ಚೌಕಿದಾರ್ ಏನು ಮಾಡಬೇಕು ಎನ್ನುವ ಆದೇಶವನ್ನು ನಾನು ನೀಡುತ್ತೇನೆ. ನಾವು ಹೇಳಿದಂತೆ ಚೌಕಿದಾರ್ ಕೇಳಬೇಕೆಂದು ಎಲ್ಲರೂ ಅಂದುಕೊಳ್ಳುತ್ತಾರೆ. ಹೀಗಾಗಿ ನಾನು ಚೌಕಿದಾರ್ ಆಗಲ್ಲ ಎಂದು ಸುಬ್ರಹ್ಮಣ್ಯಸ್ವಾಮಿ ತಿಳಿಸಿದ್ದಾರೆ. ಸಂಸದರ ಸಂದರ್ಶನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments