Webdunia - Bharat's app for daily news and videos

Install App

ಐಎಎಸ್‌ ಕೋಚಿಂಗ್ ಸೆಂಟರ್ ದುರಂತ: ಸುಪ್ರೀಂ ಕೋರ್ಟ್‌ನಿಂದ ಸ್ವಯಂಪ್ರೇರಿತ ದೂರು ದಾಖಲು

Sampriya
ಸೋಮವಾರ, 5 ಆಗಸ್ಟ್ 2024 (14:26 IST)
Photo Courtesy X
ನವದೆಹಲಿ: ನವದೆಹಲಿಯ ನೆಲಮಹಡಿಯಲ್ಲಿದ್ದ ಐಎಎಸ್‌ ಕೋಚಿಂಗ್ ಸೆಂಟರ್‌ಗೆ ನೀರು ನುಗ್ಗಿ ಯುಪಿಎಸ್‌ಸಿ ಆಕಾಂಕ್ಷಿಗಳು ಸಾವಿಗೀಡಾದ ಘಟನೆ ಸಂಬಂಧ ಸುಪ್ರೀಂ ಕೋರ್ಟ್‌ ಸೋಮವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಬಗ್ಗೆ ವಿವರಣೆ ಕೇಳಿ ಕೇಂದ್ರ ಹಾಗೂ ದೆಹಲಿ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಕೋಚಿಂಗ್ ಸೆಂಟರ್‌ಗಳು ಸಾವಿನ ಚೇಂಬರ್‌ಗಳಾಗಿ ಮಾರ್ಪಟ್ಟಿವೆ. ಸುರಕ್ಷತಾ ನಿಯಮಗಳು ಮತ್ತು ಗೌರವಯುತ ಜೀವನಕ್ಕಾಗಿ ಮೂಲಭೂತ ಮಾನದಂಡಗಳ ಸಂಪೂರ್ಣ ಪಾಲನೆ ಮಾಡದಿದ್ದರೆ ಕೋಚಿಂಗ್ ಸಂಸ್ಥೆಗಳು ಆನ್‌ಲೈನ್‌ನಲ್ಲಿ ಕಾರ್ಯನಿರ್ವಹಿಸಬಹುದು ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ.

ಕೋಚಿಂಗ್ ಸೆಂಟರ್‌ಗಳು ದೇಶದ ವಿವಿಧ ಭಾಗಗಳಿಂದ ಬರುವ ಆಕಾಂಕ್ಷಿಗಳ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿವೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಉಜ್ಜಲ್ ಭುಯನ್ ಅವರಿದ್ದ ಪೀಠ ಕಟು ಮಾತುಗಳಲ್ಲಿ ಟೀಕಿಸಿ, ಇದೊಂದು ಎಲ್ಲರ ಕಣ್ಣು ತೆರೆಸಬೇಕಾದ ಘಟನೆ ಎಂದು ಪೀಠ ಕಾಳಜಿ ವ್ಯಕ್ತಪಡಿಸಿತು.

ಓಲ್ಡ್ ರಾಜಿಂದರ್‌ ನಗರದಲ್ಲಿರುವ ರಾವ್ಸ್‌ ಐಎಎಸ್ ಸ್ಟಡಿ ಸರ್ಕಲ್‌ ಕೋಚಿಂಗ್‌ ಸೆಂಟರ್‌ನಲ್ಲಿ ಈ ದುರಂತ ನಡೆದಿತ್ತು. ಉತ್ತರ ಪ್ರದೇಶದ ಶ್ರೇಯಾ ಯಾದವ್‌ (25), ತೆಲಂಗಾಣದ ತನ್ಯಾ ಸೋನಿ (25) ಹಾಗೂ ತೆಲಂಗಾಣದ ನೆವಿನ್ ಡೆಲ್ವಿನ್ (24) ಮೃತಪಟ್ಟಿದ್ದರು.

ಪ್ರಕರಣದ ತನಿಖೆಯನ್ನು ದೆಹಲಿ ಹೈಕೋರ್ಟ್‌ ಈಗಾಗಲೇ ಸಿಬಿಐ ತನಿಖೆಗೆ ವರ್ಗಾಯಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments