Webdunia - Bharat's app for daily news and videos

Install App

ದೀನ್ ದಯಾಳ್ ಉಪಾಧ್ಯಾಯ ಸಾಧನೆ ಪ್ರಶ್ನಿಸಿದ ಜಿಲ್ಲಾಧಿಕಾರಿ ಎತ್ತಂಗಡಿ

Webdunia
ಭಾನುವಾರ, 9 ಅಕ್ಟೋಬರ್ 2016 (12:03 IST)
ಭಾರತೀಯ ಜನ ಸಂಘ ಸಂಸ್ಥಾಪಕ ದೀನ್ ದಯಾಳ್ ಉಪಾಧ್ಯಾಯ ಸಾಧನೆ ಏನು? ಎಂದು ಫೇಸ್‌ಬುಕ್‌ನಲ್ಲಿ ಪ್ರಶ್ನಿಸಿದ ಜಿಲ್ಲಾಧಿಕಾರಿ ಶಿವ್ ಅನಂತ್ ತಯಾಲ್ ಅವರನ್ನು ಚತ್ತೀಸ್‌ಗಡ್ ಸರಕಾರ ಎತ್ತಂಗಡಿ ಮಾಡಿದ ಘಟನೆ ವರದಿಯಾಗಿದೆ.
ಜಿಲ್ಲಾಧಿಕಾರಿ ಶಿವ್ ಅನಂತ್ ತಯಾಲ್ ಸಾಮಾಜಿಕ ಅಂತರ್ಜಾಲ ತಾಣವಾದ ಫೇಸ್‌ಬುಕ್‌ನಲ್ಲಿ ದೀನ್ ದಯಾಳ್ ಉಪಾಧ್ಯಾಯ ಯಾವುದೇ ಸಾಧನೆ ಮಾಡಿರುವುದು ಕಂಡು ಬಂದಿಲ್ಲ. ಒಂದೇ ಒಂದು ಚುನಾವಣೆಯಲ್ಲಿ ಭಾರಿ ಬಹುಮತಗಳ ಅಂತರದಿಂದ ಗೆದ್ದಿರುವ ಉದಾಹರಣೆಗಳಿಲ್ಲ ಎನ್ನುವ ಸಂದೇಶವನ್ನು ಪೋಸ್ಟ್ ಮಾಡಿದ್ದರಿಂದ ಬಿಜೆಪಿ ಸರಕಾರ ಆಕ್ರೋಶಗೊಂಡಿದೆ.
 
ಅನಂತ್ ತಯಾಳ್ ಅವರ ಫೇಸ್‌ಬುಕ್ ಸಂದೇಶ ಹೊರಬೀಳುತ್ತಿದ್ದಂತೆ ಸರಕಾರ ಅವರನ್ನು ಬೇರೆ ಜಿಲ್ಲೆಗೆ ವರ್ಗ ಮಾಡಿ ಕೋಪವನ್ನು ತೀರಿಸಿಕೊಂಡಿದೆ.
 
ಕೂಡಲೇ ಜಿಲ್ಲಾಧಿಕಾರಿ ಶಿವ ಅನಂತ್ ತಯಾಲ್, ಫೇಸ್‌ಬುಕ್ ಸಂದೇಶವನ್ನು ಅಳಿಸಿಹಾಕಿದ್ದಲ್ಲದೇ ಖೇದ ಕೂಡಾ ವ್ಯಕ್ತಪಡಿಸಿದ್ದರು. ದೀನ್ ದಯಾಳ್ ಉಪಾಧ್ಯಾಯ ಅವರನ್ನು ಹೀಯಾಳಿಸುವ ಉದ್ದೇಶವಿರಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments