Publish Date: Wed, 29 Jun 2022 (11:34 IST)
Updated Date: Wed, 29 Jun 2022 (11:36 IST)
ಶ್ರೀನಗರ : ಅಮರನಾಥ ಯಾತ್ರೆ ಪ್ರಾರಂಭವಾಗಲು ಕೇವಲ ಎರಡು ದಿನಗಳು ಬಾಕಿಯಿದ್ದು, ದೇಗುಲಕ್ಕೆ ಭೇಟಿ ನೀಡಲು ಯೋಜಿಸುವ ಯಾತ್ರಾರ್ಥಿಗಳಿಗೆ ಹೊಸ ಸೂಚನೆಯನ್ನು ಹೊರಡಿಸಲಾಗಿದೆ.
ಅಮರನಾಥ ದೇವಸ್ಥಾನದ ಆಡಳಿತ ಮಂಡಳಿಯು, ಈ ವರ್ಷ ಎಲ್ಲ ಅಮರನಾಥ ಯಾತ್ರಿಗಳು ತಮ್ಮ ಆಧಾರ್ ಕಾರ್ಡ್ ಅಥವಾ ಯಾವುದೇ ಬಯೋಮೆಟ್ರಿಕ್ ಪರಿಶೀಲಿಸಿದ ಸರ್ಕಾರಿ ಗುರುತಿನ ಚೀಟಿಯೊಂದಿಗೆ ತಮ್ಮ ಪ್ರಯಾಣವನ್ನು ಪ್ರಾರಂಭಿಸಬೇಕು.
ಯಾತ್ರೆಗೆ ಬರಲು ಸಾಧ್ಯವಾಗದ ಭಕ್ತರಿಗೆ ಆನ್ಲೈನ್ನಲ್ಲಿ ದರ್ಶನ, ಪೂಜೆ, ಹವನ ಮತ್ತು ಪ್ರಸಾದ ಸೌಲಭ್ಯವನ್ನು ಪಡಲಾಗುವುದು ಎಂದು ಮಾಹಿತಿ ನೀಡಿದೆ.
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಎರಡು ವರ್ಷಗಳ ವಿರಾಮದ ನಂತರ ಅಮರನಾಥ ಯಾತ್ರೆಯು ಜೂನ್ 30 ರಂದು ದಕ್ಷಿಣ ಕಾಶ್ಮೀರದ ಪಹಲ್ಗಾಮ್ನ 48-ಕಿಮೀ ನುನ್ವಾನ್ ಮತ್ತು ಮಧ್ಯ ಕಾಶ್ಮೀರದ ಗಂಡರ್ಬಾಲ್ನ 14-ಕಿಮೀ ಬಾಲ್ಟಾಲ್ನಿಂದ ಎರಡು ಮಾರ್ಗಗಳಿಂದ ಪ್ರಾರಂಭವಾಗುತ್ತದೆ. ಆಗಸ್ಟ್ 11ರವರೆಗೆ ಯಾತ್ರಿಕರು ಯಾತ್ರೆ ಮಾಡಬಹುದು.