ಮುಂಬರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿಯಾಗಿರುವ ಶೀಲಾ ದೀಕ್ಷಿತ್, ಗುಲಾಮ್ ನಬಿ ಆಜಾದ್ ಕಾಂಗ್ರೆಸ್ ಪಕ್ಷದ ಅಮಿತ್ ಶಾ ರಂತೆ ಎಂದು ಹೊಗಳಿದ್ದಾರೆ.
ಒಂದು ವೇಳೆ ಬಿಜೆಪಿಗೆ ಅಮಿತ್ ಶಾ ಚಾಣಕ್ಯನಾಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಗುಲಾಮ್ ನಬಿ ಆಜಾದ್ ಚಾಣಕ್ಯರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಗುಲಾಮ್ ನಬಿ ಆಜಾದ್ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯಸಭೆಯ ವಿಪಕ್ಷ ನಾಯಕರಾಗಿದ್ದರೆ, ಅಮಿತ್ ಶಾ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿದ್ದಾರೆ.
ಕಾಂಗ್ರೆಸ್ ಪಕ್ಷಧ ಅಧಿನಾಯಕಿ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ಉತ್ತರಪ್ರದೇಶದಲ್ಲಿ ಚುನಾವಣೆ ಪ್ರಚಾರಗಳಲ್ಲಿ ಪಾಲ್ಗೊಳ್ಳಲಿದ್ದು ಪಕ್ಷಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅಖಿಲೇಶ್ ಸಿಂಗ್ ಯಾದವ್ ನೇತೃತ್ವದ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿರುವುದರಿಂದ ಮತದಾರರು ಅವರಿಗೆ ಮತ್ತೊಮ್ಮೆ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷದ ಮೂಲ ಗುರಿ ಅಭಿವೃದ್ಧಿ ಮಾತ್ರ ಎಂದು ಶೀಲಾ ದೀಕ್ಷಿತ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.