ನಾನು ಬಾಯಿ ತೆರೆದರೆ, ದೇಶವೇ ನಡುಗಬಹುದು: ಏಕನಾಥ್ ಖಡ್ಸೆ

Webdunia
ಶನಿವಾರ, 2 ಜುಲೈ 2016 (15:36 IST)
ನಾನು ಮಾತನಾಡಿದರೆ, ಸಂಪೂರ್ಣ ದೇಶವೇ ನಡುಗಬಹುದು ಎಂದು ಹೇಳುವುದರ ಮೂಲಕ ಭೃಷ್ಟಾಚಾರ ಆರೋಪದಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಹಾರಾಷ್ಟ್ರದ ಮಾಜಿ ಸಚಿವ, ಹಿರಿಯ ಬಿಜೆಪಿ ನಾಯಕ ಏಕನಾಥ ಖಡ್ಸೆ ವಿವಾದವೊಂದನ್ನು ಮೈಗೆಳೆದುಕೊಂಡಿದ್ದಾರೆ. 
ಗುರುವಾರ ಸಂಜೆ ತವರು ಕ್ಷೇತ್ರ ಜಲಂಗಾವ್‌ನಲ್ಲಿ ತಮ್ಮ ಬೆಂಬಲಿಗರನ್ನುದ್ದೇಶಿಸಿ ಮಾತನ್ನಾಡುತ್ತಿದ್ದ ಖಡ್ಸೆ, ನನ್ನ ವಿರುದ್ಧ ಆರೋಪ ಕೇಳಿ ಬರುತ್ತಿದ್ದಂತೆ ನಾನು ರಾಜೀನಾಮೆ ನೀಡಿರಬಹುದು. ಆದರೆ ಒಂದು ವೇಳೆ ನಾನು ಬಾಯಿ ತೆರೆದರೆ ಸಂಪೂರ್ಣ ದೇಶವೇ ನಡುಗಿ ಹೋಗಬಹುದು ಎಂದು ಹೇಳಿದ್ದಾರೆ.
 
ವಿಧಾನಸಭಾ ಚುನಾವಣೆಗೂ ಮೊದಲು ಸೇನೆಯ ಜತೆ ಮೈತ್ರಿ ಮುರಿದುಕೊಳ್ಳುವ ಗಟ್ಟಿ ನಿರ್ಧಾರ ಕೈಗೊಂಡು ಬಿಜೆಪಿ ರಾಜ್ಯದಲ್ಲಿ ಕೇಸರಿ ಮೈತ್ರಿಯ ನೇತೃತ್ವವನ್ನು ಹೊಂದಿರುವುದಕ್ಕೆ ಕಾರಣ ನಾನೇ ಎನ್ನುವುದರ ಮೂಲಕ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಖಡ್ಸೆ ಟಾಂಗ್ ನೀಡಿದ್ದಾರೆ.
 
ಬಿಜೆಪಿ ಮತ್ತು ಶಿವಸೇನೆ ನಡುವಿನ ಮೈತ್ರಿ ವಿಧಾನಸಭಾ ಚುನಾವಣೆಯ ಮೊದಲು ತುಂಡಾಗದೇ ಇದ್ದಿದ್ದರೆ ಸೇನೆಯವರೇ ಮುಖ್ಯಮಂತ್ರಿಯಾಗಿರುತ್ತಿದ್ದರು. ಮೈತ್ರಿ ಮುರಿಯುವ ಕಠಿಣ ನಿರ್ಧಾರ ಕೈಗೊಂಡಿದ್ದು ನಾನೇ. ಹೀಗಾಗಿಯೇ ಇಂದು ಬಿಜೆಪಿಯವರು ಈಗ ಮುಖ್ಯಮಂತ್ರಿಯಾಗಿದ್ದಾರೆ ಎಂದ ಅವರು ತಮ್ಮಿಂದಾಗಿಯೇ ಫಡ್ನವಿಸ್ ಸಿಎಂ ಆಗಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments